20.1 C
Sidlaghatta
Wednesday, October 29, 2025

ನಮ್ಮ ನಡುವೆ ಯಾವುದೇ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳಿಲ್ಲ – ವಿ.ಮುನಿಯಪ್ಪ

- Advertisement -
- Advertisement -

ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಚೆಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಸ್ಫೋಟಗೊಂಡಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ನಡುವಿನ ಭಿನ್ನಾಭಿಪ್ರಾಯಗಳು ಹಾಗೂ ಆರೋಪಗಳ ಕುರಿತಂತೆ ಈಗ ಮುಖಂಡರ ನೇತೃತ್ವದಲ್ಲಿ ಸರಿಪಡಿಸಿಕೊಂಡಿದ್ದು, ಯಾವುದೇ ಅವಿಶ್ವಾಸಗಳು ಇಲ್ಲ ಎಂದು ಅವರು ಹೇಳಿದರು.
ರೈಲು, ರಸ್ತೆ, ನೀರು ಮುಂತಾದ ಕಾಂಗ್ರೆಸ್ ಅವಧಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸುತ್ತಾ, ನಮ್ಮಗಳ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಈಗಿನ ಶಾಸಕರು ತಮ್ಮದೆಂದು ಜನರ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಶ್ರೀನಿವಾಸಪುರ ಶಾಸಕ ರಮೇಶ್ಕುಮಾರ್ ಮಾತನಾಡಿ, ‘ಕ್ಷೇತ್ರದಲ್ಲೆಲ್ಲಾ ಓಡಾಡಿ ಕಾಂಗ್ರೆಸ್ ಗೆಲುವಿಗೆ ನಾವೆಲ್ಲಾ ಒಗ್ಗೂಡಿ ಶ್ರಮಿಸುತ್ತೇವೆ. ಎತ್ತಿನಹೊಳೆ ಯೋಜನೆ ಅಂತ್ಯವಲ್ಲ ಕೇವಲ ನಮ್ಮ ಕುಡಿಯುವ ನೀರಿನ ಅವಶ್ಯಕತೆಗೆ ತಾತ್ಕಾಲಿಕ ಪರಿಹಾರವಷ್ಟೆ. ರಾಜಕೀಯವಾಗಿ ಯಾರೂ ಯಾರನ್ನೂ ತುಳಿಯಲು ಸಾಧ್ಯವಿಲ್ಲ. ನಮ್ಮೆಲ್ಲರ ಮೇಲಿರುವ ಅಧೃಶ್ಯ ಶಕ್ತಿಯ ಕೆಲಸವದು’ ಎಂದು ಹೇಳಿದರು.
ಚಿಂತಾಮಣಿಯ ಮಾಜಿ ಶಾಸಕ ಸುಧಾಕರರೆಡ್ಡಿ ಅವರು ಬಹಿರಂಗವಾಗಿ ಕೆ.ಎಚ್.ಮುನಿಯಪ್ಪ ಅವರನ್ನು ಸೋಲಿಸಲು ಜೆ.ಡಿ.ಎಸ್ಗೆ ಬೆಂಬಲಿಸಿರುವುದರ ಬಗ್ಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ನಜೀರ್ಅಹಮದ್ ರ ಬಗ್ಗೆ,‘ಅವರೇ ಗೆಲ್ಲಲಾಗದಿದ್ದಾಗ ಬೇರೆಯವರನ್ನು ಸೋಲಿಸಲು ಸಾಧ್ಯವೇ’ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಮುಖಂಡರಾದ ಮುನಿಕೃಷ್ಣಪ್ಪ, ಸುಬ್ರಮಣಿ, ಪುರಸಭಾ ಸದಸ್ಯರು ಮತ್ತಿತರರು ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!