ನಾಗಮಂಗಲದಲ್ಲಿ ಹನುಮಜಯಂತಿ

- Advertisement -
- Advertisement -

ತಾಲ್ಲೂಕಿನ ನಾಗಮಂಗಲ ಗ್ರಾಮದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ 11ನೇ ವರ್ಷದ ಹನುಮಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಚೋಳರ ಕಾಲದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯ ತಾಲ್ಲೂಕಿನ ಪುರಾತನ ದೇವಾಲಯಗಳಲ್ಲಿ ಒಂದಾಗಿದೆ. ಶಿಥಿಲಗೊಂಡಿದ್ದ ದೇವಾಲಯವನ್ನು ಗ್ರಾಮಸ್ಥರು ನವೀಕರಿಸಿದ ನಂತರ ಪ್ರತಿ ವರ್ಷವೂ ಹನುಮಜಯಂತಿಯನ್ನು ವಿಶೇಷವಾಗಿ ಒಗ್ಗಟ್ಟಿನಿಂದ ಆಚರಿಸಿಕೊಂಡು ಬರಲಾಗುತ್ತಿದೆ.
ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ಆಗಮಿಸಿದ ಭಕ್ತರಿಗೆಲ್ಲಾ ದೇವಾಲಯದ ಸಮಿತಿ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಿದ್ದರು.
ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸಗೌಡ, ದೇವರಾಜು, ಮೋಹನ್‌, ಮಂಜುನಾಥ್‌, ವೆಂಕಟರೆಡ್ಡಿ, ಮುನಿರಾಜಪ್ಪ, ವಿಜಯ್‌, ಶಂಕರಪ್ಪ, ರಾಮಣ್ಣ, ಅರ್ಚಕ ರಾಜಗೋಪಾಲ್‌, ನಾರಾಯಣಸ್ವಾಮಿ, ವೆಂಕಟೇಶ್‌, ನಂಜೇಗೌಡ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!