ನಿವೃತ್ತ ಮುಖ್ಯಶಿಕ್ಷಕರ ಸನ್ಮಾನ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ನಿವೃತ್ತಮುಖ್ಯಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಿವೃತ್ತ ಮುಖ್ಯಶಿಕ್ಷಕ ಜಿ.ಎಂ.ಪರಮನಟ್ಟಿ ಮಾತನಾಡಿದರು.
ಗ್ರಾಮೀಣ ಭಾಗದ ಮಕ್ಕಳು ಇಂದಿನ ಸಂದರ್ಭದಲ್ಲಿ ನಗರಪ್ರದೇಶದಲ್ಲಿ ಕಲಿತ ಮಕ್ಕಳೊಂದಿಗೆ ಉನ್ನತಶಿಕ್ಷಣ, ಉದ್ಯೋಗಗಳಿಗಾಗಿ ಸ್ಪರ್ಧಿಸುವುದು ಕಷ್ಟಕರವಾಗಿದೆ. ಮಕ್ಕಳು ಕಲಿಕೆಯಲ್ಲಿ ಶಿಸ್ತು ಮೂಡಿಸಿಕೊಂಡು ಆತ್ಮವಿಶ್ವಾಸದಿಂದ ವ್ಯಾಸಂಗ ಮಾಡುವಂತೆ ಪ್ರೇರೇಪಿಸುವ, ಸಜ್ಜುಗೊಳಿಸುವ ಜವಾಭ್ದಾರಿಯು ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ತಾವು ಸಲ್ಲಿಸುತ್ತಿರುವ ಸೇವೆಯಲ್ಲಿ ವೃತ್ತಿಬದ್ಧತೆ, ಸಮಯಪ್ರಜ್ಞೆ ಇದ್ದರೆ ಯಾವುದೇ ವೃತ್ತಿಯಲ್ಲಿ ಉತ್ತಮಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಸರ್ಕಾರಿ ನೌಕರನಲ್ಲಿ ಪ್ರಾಮಾಣಿಕತೆಯಿರಬೇಕು. ಮಾಡುವ ಕೆಲಸದಲ್ಲಿ ಪಾರದರ್ಶಕತೆ ಇದ್ದರೆ ಯಾವುದೇ ಅನುಮಾನಗಳಿಗೆ ಆಸ್ಪದವಿರುವುದಿಲ್ಲ. ಆಗ ಮಾತ್ರ ನಿವೃತ್ತಿಯ ನಂತರ ಮಾನಸಿಕ ನೆಮ್ಮದಿಯಿಂದ ಬದುಕು ಸಾಗಿಸಲು ಸಾಧ್ಯವಾಗುತ್ತದೆ ಎಂದರು.
ಮುಖ್ಯಶಿಕ್ಷಕ ಬೈರಾರೆಡ್ಡಿ ಮಾತನಾಡಿ, ಸರ್ಕಾರಿ ನೌಕರರು ಸೇವಾವಧಿಯಲ್ಲಿ ತಾವು ಮಾಡಿದ ಉತ್ತಮಸೇವೆಯೇ ನಿವೃತ್ತಿಯ ನಂತರವೂ ಎಲ್ಲರ ಮನಸ್ಸಿನಲ್ಲಿ ಉಳಿಯಲು ಸಹಕಾರಿಯಾಗುವುದು. ತಮ್ಮಿಂದ ಸಮಾಜಕ್ಕೆ ಆಗಬಹುದಾದ ಅನುಕೂಲಗಳನ್ನು ನಿಸ್ವಾರ್ಥ ಮನೋಭಾವದಿಂದ ಮಾಡಬೇಕು ಎಂದರು.
ಪ್ರೌಢಶಾಲಾ ಮುಖ್ಯಶಿಕ್ಷಕರಾಗಿ ಸೇವೆಸಲ್ಲಿಸಿ ವಯೋನಿವೃತ್ತರಾದ ಜಿ.ಎಂ.ಪರಮನಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸಾರ್ವಜನಿಕಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಥಮದರ್ಜೆ ಸಹಾಯಕ ರಾಮಕೃಷ್ಣಪ್ಪ, ವೇಣುಗೋಪಾಲ್, ಶಿಕ್ಷಕ ಎಂ.ನಾರಾಯಣಸ್ವಾಮಿ, ಎಂ.ಎನ್.ಮಂಜುನಾಥ್, ಶಿಕ್ಷಕಿ ನಾಗರತ್ನ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!