ನೆನೆಗುದಿಗೆ ಬಿದ್ದಿದ್ದ ಕಂಬಾಲಹಳ್ಳಿ ರಸ್ತೆಗೆ ಡಾಂಬರೀಕರಣ

- Advertisement -
- Advertisement -

ಸುಮಾರು ಮುವ್ವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಂಬಾಲಹಳ್ಳಿ ರಸ್ತೆಯನ್ನು 75 ಲಕ್ಷ ರೂಗಳ ವೆಚ್ಚದಲ್ಲಿ ಡಾಂಬರೀಕರಣ ಮಾಡಿಸಲಾಗುತ್ತಿದೆ. ಹಲವಾರು ವರ್ಷಗಳು ಬಾಳಿಕೆ ಬರುವಂತೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಕಂಬಾಲಹಳ್ಳಿಯ ರಸ್ತೆ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಇನ್ನೂ 100 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿವಡೆ. ವಿರೋಧ ಪಕ್ಷದಲ್ಲಿದ್ದರೂ ಸಾಕಷ್ಟು ಅನುದಾನಗಳನ್ನು ತಂದು ಕೆಲಸಗಳನ್ನು ಮಾಡಿಸಿದ್ದೇನೆ. ಕ್ಷೇತ್ರಕ್ಕೆ ಅತ್ಯಗತ್ಯವಿರುವ ಐಟಿಐ ಕಾಲೇಜು, ಅಗ್ನಿ ಶಾಮಕ ದಳ, ಬಸ್‌ ಡಿಪೋ ಕಾಮಗಾರಿಗಳು ನಡೆದಿವೆ ಎಂದು ವಿವರಿಸಿದರು.
ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಕೆ.ಮಂಜುನಾಥ್‌, ತಾದೂರು ರಮೇಶ್‌, ತಿಮ್ಮಣ್ಣ, ಎಇಇ ನಾರಾಯಣಸ್ವಾಮಿ, ದ್ಯಾವಪ್ಪ, ಬೈರರೆಡ್ಡಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!