ಪೋತನ ಭಾಗವತ ಸಪ್ತಾಹ

- Advertisement -
- Advertisement -

ಕೈವಾರ ಶ್ರೀ ಯೋಗಿ ನಾರೇಯಣ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶಿಷ್ಟಾದ್ವೈತ ಸಿದ್ದಾಂತದ ಪ್ರತಿಪಾದಕರಾದ ರಾಮಾನುಜಾಚಾರ್ಯರ ಜನ್ಮ ಸಹಸ್ರಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪೋತನ ಭಾಗವತ ಪ್ರವಚನ ಸಪ್ತಾಹವನ್ನು ಜೂನ್ ೧೮ ಶನಿವಾರದಿಂದ ೭ ದಿನಗಳ ಕಾಲ ನಗರದ ಅಶೋಕರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಎಂ.ಆರ್.ಜಯರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪವಿತ್ರಗ್ರಂಥದ ಪ್ರವಚನ ಕಾರ್ಯಕ್ರಮವನ್ನು ಬೆಂಗಳೂರಿನ ಖ್ಯಾತ ವಿದ್ವಾಂಸ ಮಂಕಾಲ ಶ್ರೀಹರಿಶರ್ಮ ನಡೆಸಿಕೊಡಲಿದ್ದಾರೆ. ಜೂನ್ ೧೮ ಶನಿವಾರದಿಂದ ಆರಂಭವಾಗಿ ಜೂನ್ ೨೪ರವರೆಗೂ ಸಪ್ತಾಹ ಕಾರ್ಯಕ್ರಮವಿರುತ್ತದೆ. ಪ್ರತಿನಿತ್ಯ ಸಂಜೆ ೫ ಗಂಟೆಗೆ ಖ್ಯಾತ ಸಂಗೀತ ಕಲಾವಿದರಿಂದ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸಂಜೆ ೬.೩೦ ಗಂಟೆಗೆ ಪೋತನ ಭಾಗವತ ಪ್ರವಚನ ಆರಂಭವಾಗುತ್ತದೆ. ಶನಿವಾರ ಜೂನ್ ೧೮ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನೆರೆವೇರಲಿದೆ. ಭಕ್ತ ಮಹಾಶಯರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆಯಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!