26.1 C
Sidlaghatta
Friday, November 14, 2025

ಪ್ರತಿಭಾ ಪುರಸ್ಕಾರ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಂಘದ ಕಲ್ಯಾಣ ಮಂಟಪದ ಭೂಮಿಗೆ ಹಣ ನೀಡಿದ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ ತಿಳಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಜುಲೈ 25 ರ ಶನಿವಾರ ಚಿಂತಾಮಣಿ ರಸ್ತೆಯ ಟೋಲ್ಗೇಟ್ ಬಳಿ ಇರುವ ಒಕ್ಕಲಿಗ ಸಂಘದ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಿಚುಂಚನಗಿರಿ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಆಶೀರ್ವಚನವನ್ನು ನೀಡಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾಡಲಿದ್ದಾರೆ. ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ 20 ಮಕ್ಕಳು ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ 15 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ 23 ಮಂದಿ ದಾನಿಗಳಿಗೆ ಸನ್ಮಾನ ನಡೆಸುತ್ತಿರುವುದಾಗಿ ತಿಳಿಸಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಕೆಂಪರೆಡ್ಡಿ, ಶ್ರೀನಿವಾಸ್, ಸುಬ್ಬರೆಡ್ಡಿ, ಬಿ.ಆರ್.ಕೃಷ್ಣಪ್ಪ, ಸಿ.ಎ.ದೇವರಾಜ್, ಚನ್ನಕೇಶವ, ಶ್ರೀನಿವಾಸಮೂರ್ತಿ, ಸಿ.ಆರ್.ಪ್ರಕಾಶ್ ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!