ಸಕಾಲಕ್ಕೆ ರಕ್ತ ದೊರೆಯದೆ ನೂರಾರು ಜನರ ಪ್ರಾಣ ಹಾನಿಯಾಗುತ್ತಿದೆ. ಪ್ರತಿಯೊಬ್ಬರು ರಕ್ತದಾನ ಕುರಿತು ಇರುವ ತಪ್ಪು ತಿಳವಳಿಕೆ ದೂರ ಮಾಡಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸಬೇಕು ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ರಕ್ತಕ್ಕೆ ಪರ್ಯಾಯವಾಗಿ ಮತ್ತೊಂದು ರಕ್ಕವಿಲ್ಲ. ಹೀಗಾಗಿ ಆರೋಗ್ಯವಂತ ಮಾನವರು ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಮತ್ತೊಂದು ಜೀವ ಉಳಿಸಲು ನೆರವಾಗಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಂದ 56 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಕಾರ್ಯದರ್ಶಿ ಗುರುರಾಜರಾವ್, ಪ್ರಾಂಶುಪಾಲ ಚಂದ್ರಾನಾಯಕ್, ಉಪನ್ಯಾಸಕರಾದ ಉಮೇಶ್ರೆಡ್ಡಿ, ಡಾ.ವೆಂಕಟೇಶ್, ಡಾ.ರೋಹಿತ್, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







