22.1 C
Sidlaghatta
Monday, October 27, 2025

ಬಶೆಟ್ಟಹಳ್ಳಿ ಗ್ರಾಮಸ್ಥರಿಂದ ಕುಡಿಯುವ ನೀರಿಗಾಗಿ ಪ್ರತಿಭಟನೆ

- Advertisement -
- Advertisement -

ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರು ಸಂರ್ಪಕವಾಗಿ ಸರಬರಾಜು ಆಗುತ್ತಿಲ್ಲ, ವಿವಿಧ ಯೋಜನೆಗಳಲ್ಲಿ ಅಕ್ರಮ ಹಾಗು ಭ್ರಷ್ಟಾಚಾರ ನಡೆಯುತ್ತಿದೆ, ಗ್ರಾಮಸಭೆಯನ್ನು ನೀತಿ ನಿಯಮಗಳ ಪ್ರಕಾರ ನಡೆಸುತ್ತಿಲ್ಲ ಎಂದು ಆರೋಪಿಸಿ ಬಶೆಟ್ಟಹಳ್ಳಿ ಗ್ರಾಮಸ್ಥರು ಪಂಚಾಯತಿ ಕಚೇರಿಗೆ ಮಂಗಳವಾರ ಬೀಗ ಹಾಕಿ ಪ್ರತಿಭಟಿಸಿದರು.
ಬಶೆಟ್ಟಹಳ್ಳಿ ಗ್ರಾಮವು ಹೋಬಳಿ ಕೇಂದ್ರವಾಗಿದ್ದರೂ, ಪಂಚಾಯತಿಯಿಂದ ಸಂಪೂರ್ಣವಾಗಿ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲವಾಗಿದೆ. ಕನಿಷ್ಠ ಶಾಲಾ ಕಾಲೆಜುಗಳಲ್ಲಿ ಕೂಡ ಕುಡಿಯುವ ನೀರು ಒದಗಿಸುತ್ತಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಂ.ವೆಂಕಟೇಶ್ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಫಣೀಂದ,್ರ ನೀರಿನ ಸಮಸ್ಯೆಯನ್ನು ಈ ಕ್ಷಣದಿಂದಲೇ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಮೂಲಕ ಬಗೆಹರಿಸಲಾಗುತ್ತದೆ. ಮುಂದಿನ ತಿಂಗಳಲ್ಲಿ ಗ್ರಾಮಸಭೆ ನಡೆಸುವುದಾಗಿ ತಿಳಿಸಿ ಪ್ರತಿಭಟನಾಕಾರರ ಮನವೊಲಿಸಿದರು.
ವೆಂಕಟೇಶ, ದೇವಪ್ಪ, ನಾರಾಯಣಪ್ಪ, ನರಸಿಂಹಪ್ಪ, ನರಸಿಂಹಮೂರ್ತಿ, ವೆಂಕಟನಾರಾಯಣ, ಗಂಗಾಧರ್, ಜಯರಾಮ್, ನರಸಿಂಹ, ಪಾಪಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!