ಪ್ರಧಾನಿ ನರೇಂದ್ರ ಮೋದಿಯವರ ೬೯ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆಶಾ ಕಿರಣ ಅಂದ ಮಕ್ಕಳ ಶಾಲೆಯಲ್ಲಿ ಮಕ್ಕಳೊಂದಿಗೆ ಆಚರಿಸುತ್ತಿದ್ದೇವೆ ಎಂದು ಬಿ.ಜೆ.ಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ತಾಲ್ಲೂಕು ಬಿ.ಜೆ.ಪಿ ಯುವಮೋರ್ಚಾ ವತಿಯಿಂದ ಮಂಗಳವಾರ ನಗರದ ಆಶಾಕಿರಣ ಅಂದಮಕ್ಕಳ ಶಾಲೆಯಲ್ಲಿ ಪ್ರದಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ, ಮಕ್ಕಳೊಂದಿಗೆ ಊಟ ಮಾಡಿ ಅವರು ಮಾತನಾಡಿದರು.
ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಪ್ರಯುಕ್ತ ಸೆಪ್ಟೆಂಬರ್ ೧೪ ರಿಂದ ೧೭ ರವರೆಗೆ ಸೇವಾ ದಿವಸ್ ಆಚರಣೆ ಮಾಡುತ್ತಿದ್ದು ಅದರ ಅಂಗವಾಗಿ ಬೃಹತ್ ರಕ್ತದಾನ ಶಿಬಿರ, ಶ್ರೀ ಬಸವೇಶ್ವರ ದೇವಾಲಯದಲ್ಲಿ ಸಂಸದ ಮುನಿಸ್ವಾಮಿ ಅವರಿಂದ ಗಿಡ ನೆಡುವ ಕಾರ್ಯಕ್ರಮ, ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ, ಆಸ್ಪತ್ರೆಯನ್ನು ಸ್ವಚ್ಛತೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಇಂದು ಆಶಾಕಿರಣ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸಿ ದೇಶದ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಶುಭ ಕೋರಿ, ಅಂಧ ಮಕ್ಕಳ ಜೊತೆಯಲ್ಲಿ ಊಟ ನಾಡುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ರವಿಚಂದ್ರ, ದಾಮೋಧರ್, ನಟರಾಜು, ನರೇಶ್, ಆನಂದ್, ಮುರಳಿ, ದೇವರಾಜು, ಮಂಜುನಾಥ್, ನಾಗೇಶ್, ರಾಜು, ಆಶಾಕಿರಣ ಅಂದಮಕ್ಕಳ ಶಾಲೆಯ ಶಿಕ್ಷಕರಾದ ಗೋಪಾಲಪ್ಪ, ಶಾಂತಮ್ಮ ಹಾಜರಿದ್ದರು.
- Advertisement -
- Advertisement -
- Advertisement -