25.1 C
Sidlaghatta
Monday, December 29, 2025

ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ಜನೌಷಧಿ ಕೇಂದ್ರದ ಪ್ರಚಾರ

- Advertisement -
- Advertisement -

ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯರು ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಜನೌಷಧಿ ಕೇಂದ್ರದ ಅನುಕೂಲತೆಯ ಬಗ್ಗೆ ಪ್ರಚಾರ ನಡೆಸಿ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ವೆಂಕಟೇಶ್‌ ಮಾತನಾಡಿದರು.
ಖಾಸಗಿ ಔಷಧಿ ಕೇಂದ್ರಗಳಿಗಿಂತ ನಮ್ಮ ಭಾರತೀಯ ಜನೌಷಧಿ ಕೇಂದ್ರಗಳಲ್ಲಿ ಅತ್ಯಂತ ಕಡಿಮೆ ಬೆಲೆಗೆ ಔಷಧಿಗಳು ದೊರೆಯುತ್ತವೆ. ಸಾರ್ವಜನಿಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಬಡವರಿಗೆ ಎಟಕುವ ಬೆಲೆಗಳಲ್ಲಿ ಔಷಧಿಗಳು ಲಭ್ಯವಿರುವಂತಾಗಬೇಕು. ಔಷಧಿಗಳ ಕೊರತೆಯಿಂದ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಸಾರ್ವಜನಿಕರಿಗೆ ಮಾಹಿತಿಯನ್ನು ತಲುಪಿಸುವ ಕೆಲಸ ಆಗಬೇಕಿದೆ. ವೈದ್ಯರೂ ಜನೌಷಧಿ ಕೇಂದ್ರಗಳಲ್ಲಿ ಔಷಧಿ ಕೊಳ್ಳುವಂತೆ ರೋಗಿಗಳಿಗೆ ತಿಳಿಸಬೇಕೆಂದು ಕೋರುತ್ತಿದ್ದೇವೆ ಎಂದು ಹೇಳಿದರು.
ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ದೇವರಾಜ್‌, ದಾಮೋದರ್‌, ಮಂಜುಳಮ್ಮ, ಲಕ್ಷ್ಮೀಕಾಂತ್‌, ನಾಗೇಶ್‌, ಸುರೇಶ್‌, ನವೀನ್‌, ಮುರಳಿ, ಮಧು, ಹರೀಶ್‌ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!