19.1 C
Sidlaghatta
Wednesday, December 24, 2025

ಭಾಷೆ, ಸಂಸ್ಕೃತಿ ಉಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ

- Advertisement -
- Advertisement -

ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ಎಎಸ್ಐ ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತನಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯದ ಆವರಣದ ಎಂ.ಬಿ.ನರಸಿಂಹಮೂರ್ತಿ ವೃತ್ತದಲ್ಲಿ ಶುಕ್ರವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವೀರಗಾಸೆ ಕಲಾವಿದರ ಕಲಾಪ್ರದರ್ಶನದ ಭಂಗಿ

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಹಿರಿಮೆಯನ್ನು ಎಲ್ಲೆಡೆ ಸಾರಬೇಕಾಗಿದೆ. ದೇಶದಲ್ಲಿ ಹಲವಾರು ಭಾಷೆಗಳಿದ್ದರು 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಕನ್ನಡ ಭಾಷೆ, ಉತ್ತಮ ಲಿಪಿಯನ್ನು ಹೊಂದಿದೆ. ಇಂತಹ ಶ್ರೀಮಂತ ಭಾಷೆಯನ್ನು ಅಭಿವೃದ್ಧಿ ಪಡಿಸಿ, ಅನ್ಯಭಾಷಿಗರಿಗೂ ಕಲಿಸುವ ಮೂಲಕ ನಮ್ಮ ತನವನ್ನು ಉಳಿಸಿಕೊಳ್ಳಬೇಕಾಗಿದೆ. ಇತರೆ ಎಲ್ಲಾ ಭಾಷೆಗಳನ್ನು ಪ್ರೀತಿಸೊಣೆ ಕನ್ನಡ ಭಾಷೆಯನ್ನು ಬೆಳೆಸೊಣವೆಂದರು.
ಮುಖಂಡ ಎಂ.ಬಿ.ನರಸಿಂಹಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಅನೇಕ ಮಂದಿ ಕನ್ನಡದ ಕೆಲಸವನ್ನು ಮಾಡಿದ್ದಾರೆ. ಆ ಕೆಲಸವನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವವಾಗಿದೆ. ಆಂಗ್ಲಭಾಷೆಯ ವ್ಯಾಮೋಹದಿಂದಾಗಿ ಯುವಜನರಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಕಡಿಮೆಯಾಗುತ್ತಿದೆ. ಅವರನ್ನು ಜಾಗೃತಗೊಳಿಸಬೇಕಾದಂತಹ ಅನಿವಾರ್ಯತೆ ಇದೆ. ಮಕ್ಕಳಿಗೆ ಭಾಷಾಭಿಮಾನ ಬೆಳೆಸಬೇಕು, ಕನ್ನಡ ನಾಡಿನ ಸಂಸ್ಕೃತಿಯನ್ನು ಉಳಿಸಲು ಅವರು, ಸಕ್ರೀಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದರು.
ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರವನ್ನು ಆಯೋಜನೆ ಮಾಡಲಾಗಿತ್ತು, ಹೆಂಗಸರು ತಲೆಯ ಮೇಲೆ ಕಲಶಗಳನ್ನು ಹೊತ್ತುಕೊಂಡು ಪೂರ್ಣಕುಂಭದೊಂದಿಗೆ ಗ್ರಾಮದಲ್ಲಿ ಪ್ರಮುಖ ಬೀದಿಗಳಲ್ಲಿ ವೀರಭದ್ರ ಕುಣಿತದೊಂದಿಗೆ ಮೆರವಣಿಗೆ ನಡೆಸಿದರು. ವೀರಗಾಸೆ ಕಲಾವಿದರು, ವೀರಭದ್ರನ ಜನ್ಮರಹಸ್ಯದ ಕುರಿತು ಸಾರಿದರು.
ಮುಖಂಡರಾದ ಹೊಸಪೇಟೆ ಶಶಿಕುಮಾರ್, ವಿರೂಪಾಕ್ಷಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮುನಿಆಂಜಿನಪ್ಪ, ಹೊಸಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾರವಿಕುಮಾರ್, ಡಿ.ಮುನಿಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಿತ್ತನಹಳ್ಳಿ ಹರೀಶ್, ಶ್ರೀಧರ್ ಗೌಡ, ಸುಗಟೂರು ದೇವರಾಜು, ನಾಗಮಂಗಲ ತಮ್ಮಣ್ಣ, ಪರಮೇಶ್, ವೆಂಕಟಾಪುರ ಗ್ರಾಮ ಪಂಚಾಯಿತಿ ಪಿ.ಡಿ.ಓ. ಕಾತ್ಯಾಯಿನಿ, ನಾಗೇಶ್, ಮಹೇಶ್ ಕುಮಾರ್, ರಾಮಕೃಷ್ಣ, ಸುರೇಶ್ ಕುಮಾರ್, ವಿಕ್ಟರ್ ರವಿ, ಅಶ್ವಥ್ ನಾರಾಯಣಗೌಡ ಹಾಜರಿದ್ದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!