ಮಕ್ಕಳ ಪ್ರಗತಿಗೆ ಅವರೊಂದಿಗೆ ನಾವಿದ್ದು ಸಹಕರಿಸೋಣ

- Advertisement -
- Advertisement -

ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ, ಪ್ರಗತಿಗೆ ಅವರೊಂದಿಗೆ ನಾವಿದ್ದು ಸಹಕರಿಸೋಣ. ಮಕ್ಕಳೊಂದಿಗೆ ನಾವೂ ಸಕ್ರಿಯವಾಗಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಿದ್ಧರಾಗೋಣ ಎಂದು ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್ ಅಭಿಪ್ರಾಯಪಟ್ಟರು.
ನಗರದ ಸ್ತ್ರೀಶಕ್ತಿ ಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಐನಾ ಟ್ರಸ್ಟ್ ಸಹಯೋಗದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಗುವಿನ ಸರ್ವಾಂಗೀಣ ಬೆಳವಣಿಗೆ ಎಂದರೆ ಶಾರೀರಿಕ, ಮಾನಸಿಕ, ಬೌದ್ಧಿಕ ಹಾಗು ಆತ್ಮಸ್ತೈರ್ಯದ ವಿಕಾಸವಾಗಿದೆ. ಅದಕ್ಕೆ ಅಂಗನವಾಡಿ ಕೇಂದ್ರವೇ ಅಡಿಪಾಯವಾಗಬೇಕು. ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಆರೋಗ್ಯ, ಶಿಶುಗಳ ಆರೋಗ್ಯ ಮತ್ತು ಆರೈಕೆ ಮತ್ತು ಹದಿಹರೆಯದ ಮಕ್ಕಳ ಆರೋಗ್ಯಕ್ಕೆ ಪೂರಕವಾದಂತಹ ಯೋಜನೆಯನ್ನು ಸರ್ಕಾರ ರೂಪಿಸಿರುವುದನ್ನು ಅಂಗನವಾಡಿ ಕಾರ್ಯಕರ್ತೆಯರು ಸಮರ್ಪಕವಾಗಿ ಜನರಿಗೆ ತಲುಪಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು ಮಾತನಾಡಿ, ಇಂದು ಮಕ್ಕಳಿಗೆ ಶಾಲೆಗಳಲ್ಲಿ ಪ್ರಾಥಮಿಕ ಹಂತದಿಂದಲೂ ಎಲ್ಲ ರೀತಿಯ ಸೌಲಭ್ಯಗಳು ಸಿಗುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಜವಹರಲಾಲ್ ನೆಹರು ಅವರಿಗೆ ಮಕ್ಕಳ ಮೇಲಿದ್ದ ಇವರ ಅಕ್ಕರೆ, ಪ್ರೀತಿಯ ಸಂಕೇತವಾಗಿ ದೇಶದಾದ್ಯಂತ ಈ ದಿನದಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಕ್ಕಳಿಂದ ಛದ್ಮ ವೇಷ ಸ್ಪರ್ಧೆ, ನೃತ್ಯ, ಭಾಷಣ ಸ್ಪರ್ಧೆ ನಡೆಯಿತು. ವಿವಿಧ ವೇಷಭೂಷಣಗಳನ್ನು ಧರಿಸಿದ್ದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.
ನಗರಸಭೆ ಸದಸ್ಯ ಅಫ್ಸರ್ಪಾಷ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಕೆ.ಲಕ್ಷ್ಮೀದೇವಮ್ಮ, ಸಾಂತ್ವಾನ ಕೇಂದದ್ರದ ಡಾ.ವಿಜಯಾ, ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ವಿಜಯ್, ಐನಾ ಟ್ರಸ್ಟ್ ನಿರ್ದೇಶಕಿ ವೆರೋನಿಕಾ ಡೇವಿಡ್, ಶಿಶು ಅಭಿವೃದ್ಧಿ ಇಲಾಖೆಯ ಸಂದೀಪ್, ಅಂಜದ್, ರಾಧಮ್ಮ, ಶಾಂತ ಜಿಂದಾಳೆ, ಕಿರಿಯ ಮಹಿಳಾ ಸಹಾಯಕಿಯರು, ಪೋಷಕರು ಹಾಜರಿದ್ದರು.
 

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!