ಮಕ್ಕಳನ್ನು ಬೆಳೆಸುವ ರೀತಿಯಲ್ಲಿ ದೇಶದ ಪ್ರಗತಿ, ಅಭಿವೃದ್ಧಿ ಅಡಗಿದೆ

- Advertisement -
- Advertisement -

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಸಿ.ಆರ್.ಟಿ, ಆರ್.ಟಿ.ಇ ಕಾರ್ಯಪಡೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರ್.ಐ.ಎಂ. ಸಹಯೋಗದಲ್ಲಿ ನಡೆದ “ಬಾಲ/ಯುವ ಮಕ್ಕಳ ಮೇಳ – ಮಕ್ಕಳ ಹಕ್ಕುಗಳ ಧ್ವನಿ” ಕಾರ್ಯಕ್ರಮದಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ನಾಗಸಿಂಹ ಜಿ.ರಾವ್ ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧ ವಿಶ್ವಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಹಲವಾರು ವರ್ಷ ಕಳೆದಿದೆ. ಆದರೆ, ಇಂದಿಗೂ ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ ಎಂದು ಅವರು ತಿಳಿಸಿದರು.
ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂದಿನ ಮಕ್ಕಳು ನಾಳೆಯ ಪ್ರಜೆಗಳಲ್ಲ, ಅವರು ಇಂದಿನ ಪ್ರಜೆಗಳು. ಅವರನ್ನು ಬೆಳೆಸುವ ರೀತಿಯಲ್ಲಿ ದೇಶದ ಪ್ರಗತಿ, ಅಭಿವೃದ್ಧಿ ಅಡಗಿದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಂದ್ರಾನಾಯಕ್ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಜತೆಗೆ ವಿವಿಧ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ನ್ಯಾಯ ಒದಗಿಸಲು ಸಾಧ್ಯ. ಈ ದೇಶದ ಸಂಪತ್ತು ಹಾಗೂ ಶಕ್ತಿಯಾದ ಮಕ್ಕಳಿಗೆ ಶಿಕ್ಷಣ ನೀಡುವುದು, ಬಾಲ್ಯ ಕಾಪಾಡುವುದು ಹಾಗೂ ಕೌಶಲ್ಯ ನೀಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ತಮ್ಮ ಅನುಭವ ಹಾಗೂ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚಿತ್ರಲೇಖನ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಉತ್ತಮ ಮಕ್ಕಳ ಹಕ್ಕುಗಳ ಸಂಘ, ಮಕ್ಕಳ ಸ್ನೇಹಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮೇರಿ ಚಲ್ಲದೊರೈ, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುವರ್ಣ, ಇಂಡಿಯಾ ಲಿಟ್ರೆಸಿ ಪ್ರಾಜೆಕ್ಟ್ ವಿಕ್ಟರ್ ಟಾರೋ ಪೆರ್ ಮುಡೆ, ಎ.ಡಿ.ಡಿ.ಇಂಡಿಯಾ ಸಂಯೋಜಕ ಜಾನ್ ಮುರ್ರೆ, ಆಶಾಕಿರಣ ಅಂಧಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ಗೋಪಾಲ್, ಬಿ.ಆರ್.ಸಿ ಪ್ರಕಾಶ್, ವೆಂಕಟೇಶ್, ಆಂಜಿನಪ್ಪ, ಗಿರಿಜಾಂಬಿಕೆ, ಪ್ರಾಧ್ಯಾಪಕ ಡಾ.ವಿ.ವೆಂಕಟೇಶ್, ಆರ್.ಟಿ.ಇ. ಕಾರ್ಯಪಡೆ ಸಂಚಾಲಕ ಜೆ.ಸತೀಶ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!