ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ

- Advertisement -
- Advertisement -

ಮಹರ್ಷಿ ವಾಲ್ಮೀಕಿಯವರು ಯಾವುದೇ ಒಂದು ಜನಾಂಗಕ್ಕೆ ಸಂಬಂಧಪಟ್ಟವರಲ್ಲ. ಇಂತಹ ಮಹಾನ್ ಪುರುಷರ ಜಯಂತಿಯಲ್ಲಿ ಎಲ್ಲಾ ಸಮುದಾಯದವರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೈಜೋಡಿಸುವುದರೊಂದಿಗೆ ಅದ್ದೂರಿಯಾಗಿ ಆಚರಿಸುವಂತೆ ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಐದು ವರ್ಷಗಳಿಂದ ಸರ್ಕಾರಿ ಹಬ್ಬವನ್ನಾಗಿ ಆಚರಿಸುತ್ತಿರುವ ವಾಲ್ಮೀಕಿ ಜಯಂತಿಯನ್ನು ಕಳೆದ ಭಾರಿಗಿಂತ ಈ ಭಾರಿ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ಕಳೆದ ಐದು ವರ್ಷಗಳಿಂದ ವಾಲ್ಮೀಕಿ ಜಯಂತಿಯನ್ನು ಸರಕಾರಿ ಹಬ್ಬವನ್ನಾಗಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈಗಾಗಲೇ ತಾಲ್ಲೂಕಿನ ತಲಕಾಯಲಬೆಟ್ಟ ಸೇರಿದಂತೆ ನಗರದ ಮಯೂರ ವೃತ್ತ ಬಳಿಯಿರುವ ವಾಲ್ಮೀಕಿ ದೇವಾಲಯದ ಬಳಿ ವಾಲ್ಮೀಕಿ ಭವನ ಹಾಗೂ ಸುಂಡ್ರಹಳ್ಳಿಯ ಬಳಿ ವಾಲ್ಮೀಕಿ ವಸತಿ ಆಶ್ರಮ ನಿರ್ಮಿಸಲು ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಶುರುವಾಗಲಿದೆ ಎಂದರು.
ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಸ್.ಪುರುಶೋತ್ತಮ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ನಗರಸಭೆ ಪೌರಾಯುಕ್ತ ಎಚ್.ಎ.ಹರೀಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಮುನಿಯಪ್ಪ, ತಾಲ್ಲೂಕು ಪಂಚಾಯತಿ ಸದಸ್ಯ ಯರ್ರಬಚ್ಚಪ್ಪ, ರಾಮಚಂದ್ರಪ್ಪ, ಮುಗಿಲಡಿಪಿ ನಂಜಪ್ಪ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!