ಮಹಿಳಾ ಸ್ವಸಹಾಯ ಸಂಘಗಳು ಉತ್ತಮ ರೀತಿಯಲ್ಲಿ ಹಣಕಾಸಿನ ವ್ಯವಹಾರ ನಡೆಸುತ್ತಾ ಹಣ ಮರುಪಾವತಿಯನ್ನು ಮಾಡುತ್ತಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ತಿಳಿಸಿದರು.
ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಡಿಸಿಸಿ ಬ್ಯಾಂಕ್ ಶಿಡ್ಲಘಟ್ಟ ಶಾಖೆ ಮತ್ತು ತಾಲ್ಲೂಕು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘಗಳ ಮುಖಾಂತರ ಶೇ.4 ರಷ್ಟು ಬಡ್ಡಿ ದರದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ 2 ಕೋಟಿ 20 ಲಕ್ಷ ರೂಗಳ ಸಾಲ ಮತ್ತು ರೂಪೇ ಕಾರ್ಡ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಕುಟುಂಬ ಸುಸ್ಥಿತಿಯಲ್ಲಿರುತ್ತದೆ. ಈ ಮೂಲಕ ಗ್ರಾಮೀಣ ಬದುಕನ್ನು ಹಸನಾಗಿಸುವುದು ಈ ಸಾಲ ಸೌಲಭ್ಯದ ಹಿಂದಿನ ಉದ್ದೇಶವಾಗಿದೆ. ಸರಿಯಾಗಿ ಲೆಕ್ಕಪತ್ರವನ್ನು ಬರೆಯುತ್ತಾ, ಸಮರ್ಪಕವಾಗಿ ಸಾಲದ ಹಣವನ್ನು ಸದ್ವಿನಿಯೋಗ ಮಾಡಿಕೊಂಡಲ್ಲಿ ಸ್ವಸಹಾಯ ಸಂಘಗಳು ಸಾಕಷ್ಟು ಗ್ರಾಮ್ಯ ಬದುಕನ್ನು ಬದಲಿಸಬಹುದು ಎಂದು ಹೇಳಿದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಹೈನುಗಾರಿಕೆಯನ್ನು ನಂಬಿದಲ್ಲಿ ಮೋಸವಿಲ್ಲ. ಸ್ವಸಹಾಯ ಸಂಘಗಳು ಗ್ರಾಮಗಳಲ್ಲಿ ಹೈನುಗಾರಿಕೆಗೆ ಸಾಲದ ಹಣವನ್ನು ವಿನಿಯೋಗಿಸಿ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಬಹುದು. ಮರುಪಾವತಿ ಸಕಾಲದಲ್ಲಿ ಮಾಡುತ್ತಾ ಪುನಃ ಸಾಲವನ್ನು ಪಡೆಯುತ್ತ ಸಂಘದ ಪ್ರಗತಿ ಕಾಣುವಂತಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ 16 ಮಂದಿಗೆ ತಲಾ ಒಂದು ಲಕ್ಷ ರೂಗಳ ರೂಪೇ ಕಾರ್ಡುಗಳನ್ನು ವಿತರಿಸಿ ನಗದು ರಹಿತ ವ್ಯವಹಾರವನ್ನು ರೂಢಿಸಿಕೊಳ್ಳುವಂತೆ ತಿಳಿಸಲಾಯಿತು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ಶಿವಾರೆಡ್ಡಿ, ಪಿ.ವಿ.ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ನಗರದ ಎಸ್ಎಫ್ಸಿಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಮಳ್ಳೂರು ಎಸ್ಎಫ್ಸಿಎಸ್ ಅಧ್ಯಕ್ಷ ವೆಂಕಟರೆಡ್ಡಿ, ಮಳಮಾಚನಹಳ್ಳಿ ಎಸ್ಎಫ್ಸಿಎಸ್ ಅಧ್ಯಕ್ಷ ಮುನೇಗೌಡ, ಕುಂದಲಗುರ್ಕಿ ಎಸ್ಎಫ್ಸಿಎಸ್ ಅಧ್ಯಕ್ಷ ಮುನಿರಾಜು, ಸಂಘದ ಸಿಇಓಗಳಾದ ಮಳ್ಳೂರು ಮಂಜುನಾಥ್, ಜಂಗಮಕೋಟೆ ನಾಗರಾಜ್, ಮಳಮಾಚನಹಳ್ಳಿ ಉಷಾ, ದೇವಿಕಾರಾಣಿ, ಸಾದಲಿ ಭೀಮಪ್ಪ, ಕುಂದಲಗುರ್ಕಿ ಮುನೇಗೌಡ, ಆನೇಮಡುಗು ಸದಾಶಿವರೆಡ್ಡಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಮೇಲ್ವಿಚಾರಕ ಲಿಂಗರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -