ದೇಶದಲ್ಲಿ ಗಂಡಸರಿಗಿಂತ ಹೆಂಗಸರು ಶೇ.೧೪ ರಷ್ಟು ಸಾಕ್ಷರತೆ ಪ್ರಮಾಣದಲ್ಲಿ ಹಿಂದುಳಿದಿದ್ದಾರೆ. ಗ್ರಾಮದಲ್ಲಿ ಮಹಿಳೆಯರು ವಿದ್ಯೆ ಕಲಿತು ಕಲಿಸುವ ಕೆಲಸವಾಗಬೇಕಿದೆ. ಮಹಿಳೆಯರು ಧಾರವಾಹಿಗಳನ್ನು ನೋಡುವುದು ಬಿಟ್ಟು ಅಕ್ಷರಸ್ಥರಾಗಬೇಕೆಂದು ತುಮ್ಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹೇಮಲತ ತಿಳಿಸಿದರು.
ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಲೋಕ ಶಿಕ್ಷಣ ನಿರ್ದೇಶನಾಲಯ, ರಾಜ್ಯ ಸಾಕ್ಷರತ್ ಮಿಷನ್ ಪ್ರಾಧಿಕಾರ, ಜಿಲ್ಲಾ ಲೋಕ ಶಿಕ್ಷಣ ಸಮಿತಿ, ತಾಲ್ಲೂಕು ಲೋಕ ಶಿಕ್ಷಣ ಸಮಿತಿ ಹಾಗೂ ತುಮ್ಮನಹಳ್ಳಿ ಗ್ರಾಮ ಲೋಕ ಶಿಕ್ಷಣ ಸಮಿತಿ ಇವರ ಸಹಯೋಗದೊಂದಿಗೆ ಮೂರು ದಿನಗಳ ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಅನಕ್ಷರತೆ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಸಾಕ್ಷರ ಸ್ವಯಂಸೇವಕರು ಪಣತೊಡಬೇಕು. ಅಕ್ಷರ ಜ್ಞಾನ ಮಹತ್ವದ್ದಾಗಿದೆ ಗ್ರಾಮದಲ್ಲಿ ಪ್ರತಿಯೊಬ್ಬರು ಅಕ್ಷರ ಜ್ಞಾನ ಹೊಂದಿ ಮಕ್ಕಳಿಗೂ ಅಕ್ಷರ ಜ್ಞಾನ ನೀಡುವ ಮೂಲಕ ಪೂರ್ಣ ಸಾಕ್ಷರತೆ ಹೊಂದಿದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಕಲಿಸುವರು ಹಾಗೂ ಕಲಿಯುವವರು ಆಸಕ್ತಿ ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಆಟಗಳನ್ನು ಆಡಿಸಲಾಯಿತು. ಸ್ವಯಂ ಸೇವಕರಿಗೆ ‘ಬಾಳಿಗೆ ಬೆಳಕು’ ಎಂಬ ಪುಸ್ತಕವನ್ನು ನೀಡಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮುಂಜುನಾಥ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣಪ್ಪ, ಕದಿರಪ್ಪ, ಶಿಕ್ಷಕರಾದ ಗಣೇಶ್, ಚಂದ್ರು, ಮಾಲತಿ, ಅನಿತಾ, ರವಿಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -