24.2 C
Sidlaghatta
Saturday, October 11, 2025

ಮಾದರಿ ಗ್ರಾಮ ಪಂಚಾಯತಿಗಳನ್ನಾಗಿಸಲು ಕಾರ್ಯಾಗಾರ

- Advertisement -
- Advertisement -

ಗ್ರಾಮ ಪಂಚಾಯತಿಗಳನ್ನು ಮಾದರಿ ಗ್ರಾಮ ಪಂಚಾಯತಿಗಳನ್ನಾಗಿ ಬದಲಾಯಿಸಲು ಗ್ರಾಮೀಣಾಭಿವೃದ್ಧಿಯೊಂದಿಗೆ ಮಾನವಾಭಿವೃದ್ಧಿಯನ್ನೂ ಮಾಡುವ ನಿಟ್ಟಿನಲ್ಲಿ ಕಾರ್ಯಾಗಾರ ನಡೆಸುತ್ತಿರುವುದಾಗಿ ಅಬ್ದುಲ್ ನಜೀರ್ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣಪ್ಪ ತಿಳಿಸಿದರು.
ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಗ್ರಾಮ ಪಂಚಾಯತಿ ಮಾನವ ಅಭಿವೃದ್ಧಿ ಹಾಗೂ ಸಂಬಂಧ’ ಕುರಿತಂತೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ನೈರ್ಮಲ್ಯ, ಆರೋಗ್ಯ, ಶುದ್ದ ಕುಡಿಯುವ ನೀರು, ಅಂಗನವಾಡಿ ಪೂರಕ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣದ ಬಗ್ಗೆ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮವಿದು. ಈ ಶಿಬಿರದ ಮೂಲಕ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವವರಿಗೆ ಬಹಳಷ್ಟು ಉಪಯುಕ್ತ ಮಾಹಿತಿಯನ್ನು ನೀಡಲಾಗುತ್ತಿದೆ. ಗ್ರಂಥಾಲಯಗಳ ಆಧುನೀಕರಣ, ಆಡಳಿತ ಸುಧಾರಣೆಗೆ ಜನಪ್ರತಿನಿಧಿಗಳ ಪಾತ್ರ ತಿಳಿಸಿಕೊಡಲಾಗುತ್ತಿದೆ.
ಅಬ್ದುಲ್ ನಜೀರ್ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಹಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಮುಖ್ಯಶಿಕ್ಷಕರು, ಶಾಲಾಭಿವೃದ್ಧಿ ಅಧ್ಯಕ್ಷರುಗಳಿಗೆ ಈ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ತಾಲ್ಲೂಕಿನ 27 ಗ್ರಾಮ ಪಂಚಾಯತಿಗಳನ್ನು ವಿಂಗಡಿಸಿ ಹಂತಹಂತವಾಗಿ ಡಿಸೆಂಬರ್‌ ತಿಂಗಳವರೆಗೂ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಬ್ದುಲ್ ನಜೀರ್ ಸಾಬ್‌ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಮಂಜುನಾಥ್‌, ನಾಗಮಂಗಲ ಪಂಚಾಯತಿ ಕಾರ್ಯದರ್ಶಿ ಗೋಪಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!