ಯಾದವ ಜನಾಂಗದವರು ಹಿಂದೆ ಉಳಿದಿದ್ದಾರೆ

- Advertisement -
- Advertisement -

ತಾಲ್ಲೂಕಿನಾದ್ಯಂತ ಯಾದವ ಜನಾಂಗದವರು ಆರ್ಥಿಕವಾಗಿ ಹಾಗು ರಾಜಕೀಯವಾಗಿ ತೀರಾ ಹಿಂದೆ ಉಳಿದಿದ್ದು ಸಮುದಾಯದವರ ಏಳಿಗೆಗಾಗಿ ಮುಖಂಡರು, ಜನಪ್ರತಿನಿಧಿಗಳು ಮುಂದಾಗಬೇಕು ಎಂದು ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಕೇಶವಮೂರ್ತಿ ತಿಳಿಸಿದರು.
ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಶ್ರೀ ಬ್ಯಾಟರಾಯನಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಯಾದವ(ಗೊಲ್ಲರ) ಸಮಾವೇಶದಲ್ಲಿ ಅವರು ಮಾತನಾಡಿದರು.
ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಯಾದವ ಜನಾಂಗದವರನ್ನು ಓಟ್ ಬ್ಯಾಂಕಿನಂತೆ ರಾಜಕಾರಣಿಗಳು ಉಪಯೋಗಿಸಿಕೊಳ್ಳುತ್ತಿದ್ದಾರೆ. ಆದರೆ ಯಾದವ ಜನಾಂಗಕ್ಕೆ ಸಿಗಬೇಕಾದ ಸವಲತ್ತುಗಳನ್ನು ನೀಡುವುದರಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ಎ.ಪಿ.ಎಂ.ಸಿ ಸದಸ್ಯ ಡಿ.ವಿ.ವೆಂಕಟೇಶ್ ಮಾತನಾಡಿ, ನಾನು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಪರ್ದಿಸಲು ಆಕಾಂಕ್ಷಿಯಾಗಿದ್ದೇನೆ. ಪಕ್ಷದಿಂದ ಟಿಕೆಟ್ ನೀಡಿದರೆ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತೇನೆ ಇಲ್ಲವಾದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಹಾಗಾಗಿ ಸಮುದಾಯದ ಮುಖಂಡರೂ ಸೇರಿದಂತೆ ಯುವಕರು ಬೆಂಬಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪದ್ಮಾವತಿ, ತಾಲ್ಲೂಕು ಯಾದವ ಸಂಘದ ಗೌರವಾಧ್ಯಕ್ಷ ರಾಮಕೃಷ್ಣಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುಬ್ರ್ಯಮಣಿ, ಎಸ್.ಎ.ನಾಗರಾಜ್, ನರಸಿಂಹಪ್ಪ, ಎಸ್.ಎ.ನಾರಾಯಣಸ್ವಾಮಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!