27.1 C
Sidlaghatta
Sunday, February 22, 2026

ರಕ್ತಕ್ಕೆ ಬೇಡಿಕೆ ಹೆಚ್ಚಿದೆ

- Advertisement -
- Advertisement -

ಬೇಸಿಗೆ ಕಾಲದಲ್ಲಿ ರಕ್ತ ದಾನ ಮಾಡುವವರು ವಿರಳವಾಗಿರುವುದರಿಂದ ರಕ್ತಕ್ಕೆ ಬೇಡಿಕೆ ಹೆಚ್ಚಿದೆ. ಇಂಥಹ ಸಮಯದಲ್ಲಿ ರಕ್ತದಾನ ಶಿಬಿರಗಳ ಮೂಲಕ ಗ್ರಾಮಸ್ಥರು ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಸದಸ್ಯ ಡಾ.ಜಯರಾಮರೆಡ್ಡಿ ತಿಳಿಸಿದರು.
ತಾಲ್ಲೂಕಿನ ಪಲಿಚೇರ್ಲು ಗ್ರಾಮ ಪಂಚಾಯತಿಯ ಸೋಮನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಭಾರತೀಯ ರೆಡ್ಕ್ರಾಸ್ ಸೊಸೈಟಿ, ಪಲಿಚೇರ್ಲು ಗ್ರಾಮ ಪಂಚಾಯತಿ, ಗ್ಲೋಬಲ್ ಐ ಫೌಂಡೇಷನ್, ರೋಟರಿ ಕ್ಲಬ್, ಸೋಮನಹಳ್ಳಿ, ಕುಂದಲಗುರ್ಕಿ ಮತ್ತು ಸುತ್ತಮುತ್ತಲ ಗ್ರಾಮಸ್ಥರ ಸಹಯೋಗದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಸಂಪೂರ್ಣ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿಯವರು ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ ಮಾಡುತ್ತಿರುವ ಈ ಸಾಮಾಜಿಕ ಚಟುವಟಿಕೆಗಳು ಶ್ಲಾಘನೀಯ ಎಂದರು.
ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಗಣ್ಯರು ಚಾಲನೆಯನ್ನು ನೀಡಿದರು. ಶಿಡ್ಲಘಟ್ಟದಿಂದ ಯೂನಿಟಿ ಸಿಲ್ಸಿಲಾ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.
ಒಟ್ಟಾರೆ 66 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ರೆಡ್ಕ್ರಾಸ್ ಸೊಸೈಟಿ ತಾಲ್ಲೂಕು ಕಾರ್ಯದರ್ಶಿ ಗುರುರಾಜರಾವ್, ಡಾ.ಲೋಕೇಶ್, ವಕೀಲ ಪ್ರಕಾಶ್, ಗ್ರಾಮ ಪಂಚಾಯತಿ ಸದಸ್ಯ ವೆಂಕಟಶಿವಾರೆಡ್ಡಿ, ಆರೋಗ್ಯ ಇಲಾಖೆಯ ಸತೀಶ್, ಪಿ.ಡಿ.ಒ ವಜ್ರೇಶ್, ರೈತಸಂಘದ ಮುನಿಕೆಂಪಣ್ಣ, ಪ್ರತೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!