21.1 C
Sidlaghatta
Saturday, December 20, 2025

ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ತೊಲಗಿಸಿ

- Advertisement -
- Advertisement -

ರಕ್ತದಾನದ ಬಗ್ಗೆ ಇರುವಂತಹ ತಪ್ಪು ಕಲ್ಪನೆಗಳನ್ನು ತೊಲಗಿಸಿ, ಪ್ರತಿಯೊಬ್ಬ ಆರೋಗ್ಯ ಜನರು ರಕ್ತದಾನ ಮಾಡುವುದರಿಂದ ಸಮಾಜದಲ್ಲಿನ ರಕ್ತದ ಕೊರತೆಯಿಂದ ಮರಣ ಹೊಂದುತ್ತಿರುವ ಜನರನ್ನು ರಕ್ಷಣೆ ಮಾಡಲು ಸಾದ್ಯವಾಗುತ್ತದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಹೇಳಿದರು.
ನಗರದ ನಗರೇಶ್ವರ ಕಲ್ಯಾಣಮಂಟಪದಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿ, ಯುವಬ್ರೀಗೇಡ್ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಸಂಭ್ರಮಾಚರಣೆ ಹಾಗೂ ಚಂದ್ರಶೇಖರ್ ಅಜಾದ್ರವರ ಜಯಂತಿಯ ಅಂಗವಾಗಿ ರಕ್ತದಾನ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ರಕ್ತದಾನದಿಂದ ಅನೇಕ ಅಮೂಲ್ಯವಾದ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಕೇವಲ ಅವಿದ್ಯಾವಂತರಲ್ಲದೆ ವಿಧ್ಯಾವಂತರಲ್ಲೂ ರಕ್ತದಾನ ಬಗ್ಗೆ ತಪ್ಪುಕಲ್ಪನೆಗಳು ಬೇರೂರಿದ್ದು, ಅಂತಹವರಿಗೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಅವರಿಗೆ ಧೈರ್ಯ ತುಂಬಿಸುವಂತಹ ಕೆಲಸವನ್ನು ಮಾಡಲಾಗುತ್ತಿದೆ. ರಕ್ತದಾನ ಮಾಡುವುದರಿಂದ ದೈಹಿಕವಾಗಿಯೂ ಹಲವು ಉಪಯೋಗಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನದ ಕೊನೆಯ ಕ್ಷಣದವರೆಗೂ ನಿರಂತರವಾಗಿ ಹೋರಾಟ ನಡೆಸಿದಂತಹ ಹೋರಾಟಗಾರ ಪ್ರತಿಯೊಬ್ಬ ಭಾರತೀಯರಿಗೂ ಸ್ಪೂರ್ತಿಯಾಗಬೇಕು ಎಂದರು.
ಡಾ.ಸತ್ಯನಾರಾಯಣರಾವ್ ಮಾತನಾಡಿ, ರಾಷ್ಟ್ರನಾಯಕರು ದೇಶಕ್ಕಾಗಿ ಸಲ್ಲಿಸಿದ ಸೇವೆಯನ್ನು ದೇಶದ ಪ್ರತಿಯೊಬ್ಬ ಯುವಕರಿಗೂ ಸ್ಪೂರ್ತಿಯಾಗಬೇಕು. ರಾಷ್ಟ್ರದಲ್ಲಿ ಮಾಜಿ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ನಡೆದ ಕಾರ್ಗಿಲ್ ಯದ್ಧದಲ್ಲಿ ಪಾಕಿಸ್ತಾನದ ಸೈನಿಕರನ್ನು ಹಿಮ್ಮೆಟ್ಟಿಸಿ ದಿಟ್ಟತನದ ಹೋರಾಟ ಮಾಡಿದಂತಹ ಸೈನಿಕರಿಗೆ ಕೃತಜ್ಞತೆಯನ್ನು ಸಲ್ಲಿಸಬೇಕಾದಂತಹ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಪುರ ಠಾಣೆ ಸಬ್ ಇನ್ಸ್ಪೆಕ್ಟರ್ ವಿಜಯ್, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ದಾಮೋದರ್, ರಮೇಶ್ ಬಾಯಿರಿ, ತ್ಯಾಗರಾಜ್, ರವಿ, ನಂದೀಶ್, ಶ್ರೀಧರ್, ಸದಾಶಿವ, ಶ್ರೀರಾಮರೆಡ್ಡಿ, ಮುನಿರಾಜು, ಸುಜಾತಮ್ಮ, ಶಿವಕುಮಾರಗೌಡ, ರತ್ನಮ್ಮ, ಮುನಿರತ್ನಮ್ಮ, ಶಿವಮ್ಮ, ಮಧು, ಅಶ್ವಥ್, ಮಂಜುಳಮ್ಮ, ಮಧು ಬಾಲಯ್ಯ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!