23.8 C
Sidlaghatta
Sunday, July 6, 2025

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ

- Advertisement -
- Advertisement -

ಶಿಡ್ಲಘಟ್ಟದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯ ಮುಂದೆ ಮಂಗಳವಾರ ಪ್ರತಿಭಟಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಸದಸ್ಯರು ರೈತರ ಬರಪರಿಹಾರ ಅನುದಾನವನ್ನು ರೈತರ ಖಾತೆಗಳಿಗೆ ಜಮಾ ಮಾಡುವಂತೆ ವ್ಯವಸ್ಥಾಪಕಿ ಹೇಮಲತಾ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ರೈತರ ಬರಪರಿಹಾರ ಅನುದಾನ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ಜಮಾ ಮಾಡದಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಸದಸ್ಯರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯ ಮುಂದೆ ಮಂಗಳವಾರ ಪ್ರತಿಭಟಿಸಿದರು.
ರೈತರು ಈಗಾಗಲೇ ಸಾಕಷ್ಟು ಕಷ್ಟ ಹಾಗೂ ನಷ್ಟದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಬಿಡುಗಡೆ ಮಾಡಿರುವ ಬರಗಾಲದ ಅನುದಾನ ರೈತರಿಗೆ ತಾತ್ಕಾಲಿಕ ಪರಿಹಾರವನ್ನು ನೀಡಲಿದೆ. ತಹಶೀಲ್ದಾರರು 4,36,28,478 ರೂಗಳನ್ನು ಬ್ಯಾಂಕಿಗೆ ಜಮೆ ಮಾಡಿದ್ದು, 8,478 ಫಲಾನುಭವಿ ರೈತರ ಪಟ್ಟಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ. ಆದರೂ ರೈತರ ಖಾತೆಗಳಿಗೆ ಇನ್ನೂ ಜಮೆ ಮಾಡಿಲ್ಲ ಎಂದು ಆರೋಪಿಸಿದರು.
ತಕ್ಷಣ ರೈತರ ಬರಪರಿಹಾರದ ಹಣ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಬ್ಯಾಂಕ್ ವ್ಯವಸ್ಥಾಪಕಿ ಹೇಮಲತಾ ಅವರಿಗೆ ಮನವಿ ಸಲ್ಲಿಸಿದರು.
ಬ್ಯಾಂಕ್ ವ್ಯವಸ್ಥಾಪಕಿ ಹೇಮಲತಾ ಮಾತನಾಡಿ, ಫಲಾನುಭವಿಗಳ ಕಾತೆಗಳ ಬಗ್ಗೆ ಸರಿಯಾದ ಮಾಹಿತಿಯಿಲ್ಲದ ಕಾರಣ ಗೊಂದಲವಾಗಿ ತಡವಾಗಿದೆ. ಎರಡು ಮೂರು ದಿನಗಳಲ್ಲಿ ಫಲಾನುಭವಿ ರೈತರ ಖಾತೆಗಳಿಗೆ ಹಣ ಜಮೆ ಮಾಡಲಾಗುವುದೆಂದು ತಿಳಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಪ್ರತೀಶ್, ರಮೇಶ್, ಮುನಿಕೆಂಪಣ್ಣ, ಬಾಲಮುರಳಿಕೃಷ್ಣ, ವೆಂಕಟರೆಡ್ಡಿ, ಶಿವಣ್ಣ, ನಾರಾಯಣಸ್ವಾಮಿ, ನಾಗರಾಜ್, ಮಾರಪ್ಪ, ಗೋವಿಂದಪ್ಪ, ನಾಗೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!