ಶಿಡ್ಲಘಟ್ಟ ತಾಲ್ಲೂಕಿನ ರೈತಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಮಂಗಳವಾರ ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕ ಹನುಮಂತಪ್ಪ ಅವರಿಗೆ ರೇಷ್ಮೆ ಗೂಡಿಗೆ, ಯಂತ್ರೋಪಕರಣಗಳಿಗೆ ಹಾಗೂ ಹುಳು ಸಾಕಾಣಿಕಾ ಮನೆಗಳಿಗೆ ನೀಡುವ ಸಹಾಯಧನವನ್ನು ವಿಳಂಬ ಮಾಡದೆ ಪಾವತಿಸಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದರು. ತಾಲ್ಲೂಕು ರೈತಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ರವಿಪ್ರಕಾಶ್, ಪ್ರತೀಶ್, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.
- Advertisement -