ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಸಂಘದ ಕಛೇರಿಗೆ ಸರ್ಕಾರದ ವಿವಿಧ ಇಲಾಖೆಯಿಂದ ರೈತರಿಗೆ ಅಭ್ಯವಿರುವ ಸರ್ಕಾರಿ ಸವಲತ್ತುಗಳ ಬಗ್ಗೆ ಆಗಿಂದ್ಹಾಗ್ಗೆ ಮಾಹಿತಿಯನ್ನು ಪತ್ರ ಮುಖೇನ ನೀಡಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಶುಕ್ರವಾರ ಮನವಿಪತ್ರವನ್ನು ರೈತರು ನೀಡಿದರು.
ನಗರದ ರೇಷ್ಮೆ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಭೂ ಅಭಿವೃದ್ಧಿ ಬ್ಯಾಂಕ್, ರೇಷ್ಮೆ ಗೂಡಿನ ಮಾರುಕಟ್ಟೆ, ತಾಲ್ಲೂಕು ಪಂಚಾಯತಿ ಮತ್ತು ತಹಶೀಲ್ದಾರ್ ಕಛೇರಿಯಲ್ಲಿ ಮನವಿಯನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ವಿವರಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಸಂಘದ ಕಛೇರಿಗೆ ಸರ್ಕಾರದ ಸವಲತ್ತುಗಳು ತಿಳಿಸಿದಲ್ಲಿ ಸಂಘದ ಮೂಲಕ ರೈತರು ಅದರ ಬಗ್ಗೆ ಮಾಹಿತಿ ಪಡೆದು ಸರ್ಕಾರಿ ಸವಲತ್ತುಗಳ ಉಪಯೋಗ ಮಾಡಿಕೊಳ್ಳುತ್ತಾರೆ. ಅದರ ಮುಖೇನ ಆರ್ಥಿಕವಾಗಿ ಅಭಿವೃದ್ಧಿಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ನಗರ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ವೈ.ರಾಮಕೃಷ್ಣಪ್ಪ, ಪಿ.ವಿ.ದೇವರಾಜ್, ವೇಣುಗೋಪಾಲ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







