ತಾಲ್ಲೂಕಿನ ಜಂಗಮಕೋಟೆ ಕೆರೆಯ ಕಟ್ಟೆಯ ಮೇಲೆ ಲಾರಿ ಮತ್ತು ಟೆಂಪೋ ಬುಧವಾರ ಬೆಳಿಗ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.
ವಿಜಯಪುರದಿಂದ ಕೋಲಾರದ ಕಡೆಗೆ ಸಾಗುತ್ತಿದ್ದ ಸರಕು ಸಾಗಾಣಿಕಾ ಲಾರಿ ಮತ್ತು ಕೋಲಾರದ ಕಡೆಯಿಂದ ಚಿಕ್ಕಬಳಖ್ಳಾಪುರದ ಕಡೆಗೆ ಟೊಮೆಟೋ ಸಾಗಿಸುತ್ತಿದ್ದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕನ ಬಲಗಾಲು ಮುರಿದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಂಗಮಕೋಟೆ ಹೊರಠಾಣೆ ಎಎಸ್ಐ ಮತ್ತು ಸಿಬ್ಬಂದಿ ಆಗಮಿಸಿ, 108 ಆಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ಗಾಯಾಳುವನ್ನು ಕಳುಹಿಸಿದರು.
ಕೆರೆ ಕಟ್ಟೆಯ ಮೇಲಿನ ರಸ್ತೆ ಅತ್ಯಂತ ಕಿರಿದಾಗಿದ್ದು, ಹಳ್ಳಕೊಳ್ಳಗಳಿರುವುದರಿಂದ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿರುತ್ತದೆ. ಅತ್ಯಂತ ಹೆಚ್ಚು ವಾಹನ ಸಂಚಾರವಿರುವುದರಿಂದ ಈ ರಸ್ತೆಯನ್ನು ಅಗಲೀಕರಣ ಮಾಡಿ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







