23.1 C
Sidlaghatta
Sunday, October 26, 2025

ವಚನ ಸಾಹಿತ್ಯವನ್ನು ಗ್ರಾಮೀಣ ಭಾಗದಲ್ಲಿ ಪಸರಿಸಿ

- Advertisement -
- Advertisement -

ವಚನ ಸಾಹಿತ್ಯವನ್ನು ಮತ್ತು ಅದರ ಸಾರಸಂಗ್ರಹವನ್ನು ಗ್ರಾಮೀಣ ಭಾಗದಲ್ಲಿ ಪಸರಿಸುವ ಹೊಣೆಗಾರಿಕೆ ವಚನ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ್ದಾಗಿದೆ ಎಂದು ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನಾಥನಂದ ಸ್ವಾಮೀಜಿ ಹೇಳಿದರು.
ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜನೆ ಮಾಡಲಾಗಿದ್ದ ತಾಲ್ಲೂಕು ವಚನ ಸಾಹಿತ್ಯ ಪರಿಷತ್ತಿನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಜಾತಿ ವ್ಯವಸ್ಥೆಯನ್ನು ತೊಲಗಿಸುವ ನಿಟ್ಟಿನಲ್ಲಿ ಈ ಸಮಾಜದಲ್ಲಿನ ಭ್ರಷ್ಟಾಚಾರ ಅಸ್ಪ್ರೂಶ್ಯತೆಯನ್ನು ತೊಲಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಿಕೊಟ್ಟಿದ್ದ ಅನುಭವ ಮಂಟಪದ ಸಾರ್ವಕಾಲಿಕವಾದದ್ದು. ತಮ್ಮ ಜೀವನದ ಅನುಭವಗಳನ್ನು ವಚನಗಳ ಮುಖಾಂತರ ವ್ಯಕ್ತಪಡಿಸಿರುವ ಎಲ್ಲಾ ವಚನಕಾರರ ಭಾವನೆಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿವೆ, ಈ ನಿಟ್ಟಿನಲ್ಲಿ ವಚನ ಸಾಹಿತ್ಯ ಪರಿಷತ್ತು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಜೀವನದಲ್ಲಿ ಸ್ವಾರ್ಥವನ್ನು ಬದಿಗೊತ್ತಿ ಸನ್ಮಾರ್ಗವನ್ನು ಅರಿಯಬೇಕು, ದಾಸರು, ಶರಣರ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದರು.
ವಿವೇಕಾನಂದ ರಾಮಕೃಷ್ಣಾಶ್ರಮ ಮಠದ ಪೂರ್ಣಾನಂದಸ್ವಾಮೀಜಿ ಮಾತನಾಡಿ, ವಚನ ಸಾಹಿತ್ಯ ಪರಿಷತ್ತಿನ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಸಾಹಿತ್ಯಾಭಿರುಚಿಯನ್ನು ಯುವಜನತೆಯಲ್ಲಿ ಮೂಡಿಸಬೇಕು. ವಚನ ಸಾಹಿತ್ಯ ಜೀವನ ಮಾರ್ಗವನ್ನು ಬೋದಿಸುವುದರಿಂದ ಸನ್ಮಾರ್ಗವನ್ನು ಕಾಣಲು ಸಾಧ್ಯವಾಗುತ್ತದೆ ಎಂದರು.
ವಚನ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ತ್ಯಾಗರಾಜ್ ಮಾತನಾಡಿ ೧೨ ನೇ ಶತಮಾನದಿಂದಲೂ ವಚನ ಸಾಹಿತ್ಯದ ಮೇಲೆ ನಿರಂತರವಾಗಿ ದಬ್ಬಾಳಿಕೆಗಳು ನಡೆಯುತ್ತಲೇ ಇದ್ದು, ಅವುಗಳನ್ನು ಸಂರಕ್ಷಣೆ ಮಾಡಿ, ಮುಂದಿನ ಪೀಳಿಗೆಗೆ ತಲುಪಿಸಿ, ಸಾಹಿತ್ಯವನ್ನು ಜೀವಂತವಾಗಿ ಉಳಿಸುವಂತಹ ಪ್ರಯತ್ನವನ್ನು ಪ್ರಾಮಾಣಿಕವಾಗಿ ಎಲ್ಲರೂ ಮಾಡಬೇಕಾಗಿದೆ ಎಂದರು.
ಇದೇ ವೇಳೆ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿಕೊಂಡಿದ್ದ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಬಸ್ ನಿಲ್ದಾಣದಿಂದ ಸಾಗಿ ಬಂದ ಮೆರವಣಿಗೆಗೆ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಚಾಲನೆ ನೀಡಿದರು.
ಶಾಸಕ ಎಂ.ರಾಜಣ್ಣ, ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿ.ಬಿ.ಹನುಮಂತಪ್ಪ, ಮಹಿಳಾ ಜಿಲ್ಲಾಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷ ಚಲಪತಿ ಅಗಲಗುರ್ಕಿ, ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ನಿವೃತ್ತ ಪ್ರಾಂಶುಪಾಲ ಸಿ.ಅಶ್ವಥ್ಥಮ್ಮ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ನಂದೀಶ್, ಭಕ್ತರಹಳ್ಳಿ ಬೈರೇಗೌಡ, ಎಸ್.ಎಂ.ರವಿಪ್ರಕಾಶ್, ಈಧರೆಪ್ರಕಾಶ್ ಮುಂತಾದವರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!