20.3 C
Sidlaghatta
Friday, August 1, 2025

ವಾಜಪೇಯಿ ಹುಟ್ಟುಹಬ್ಬಕ್ಕೆ ಕಂಬಳಿ ವಿತರಣೆ

- Advertisement -
- Advertisement -

ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕವಿ, ಪತ್ರಕರ್ತ, ಶ್ರೇಷ್ಠ ವಾಗ್ಮಿ, ಚಿಂತಕ, ದಾರ್ಶನಿಕ, ನಿಸ್ವಾರ್ಥ ರಾಜಕಾರಣಿ ಹಾಗೂ ನುಡಿದಂತೆ ನಡೆಯುವ ಮಾನವತಾವಾದಿಯಾಗಿ ಭಾರತ ಹಾಗೂ ವಿಶ್ವದಲ್ಲಿ ಹೆಸರು ವಾಸಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಡಿ.ಆರ್.ಶಿವಕುಮಾರಗೌಡ ಹೇಳಿದರು.
ತಾಲ್ಲೂಕು ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿಯವರ ೯೪ ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಾಲ್ಲೂಕಿನ ಹಾರಡಿ ಗ್ರಾಮದಲ್ಲಿ ಸೋಮವಾರ ೯೪ ಬಡ ಜನರಿಗೆ ಕಂಬಳಿ ವಿತರಣೆ, ೯೪ ಜನರಿಗೆ ಪ್ರಧಾನಮಂತ್ರಿ ಫಸಲ್ಭೀಮಾ ಯೋಜನೆಯ ವಿಮೆ ಪತ್ರ ಹಾಗೂ ೯೪ ಸಸಿಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರದಾನಿಯಾಗಿದ್ದಾಗ ಜಾರಿಗೆ ತಂದಿದ್ದ ಸರ್ವಶಿಕ್ಷಣ ಅಭಿಯಾನ ಯೋಜನೆ, ಪ್ರಧಾನ ಮಂತ್ರಿ ಗ್ರಾಮಸಡಕ್ ಯೋಜನೆ ಸೇರಿದಂತೆ ಅನೇಕ ಕಾರ್ಯಕ್ರಮಗಳ ಮುಖಾಂತರ ದೇಶದ ಗ್ರಾಮಾಂತರ ಪ್ರದೇಶಗಳಲ್ಲಿನ ಜನರು, ತಮ್ಮ ಜೀವನಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು.
ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶದ ರಕ್ಷಣೆಯ ವಿಚಾರದಲ್ಲಿ ತೆಗೆದುಕೊಂಡ ಕೆಲವು ನಿರ್ಣಯಗಳಿಂದಾಗಿ ಕಾರ್ಗಿಲ್ ಯುದ್ದವನ್ನು ಭಾರತೀಯ ಯೋಧರು ಗೆಲ್ಲಲು ಸಾಧ್ಯವಾಯಿತು. ವಾಜಿಪೇಯಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ವಿಶೇಷವಾಗಿ ಯುವಜನತೆ ಪಾಲಿಸಿದಾಗ ಮಾತ್ರ ಸುಭದ್ರವಾದ ದೇಶವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಹಾರಡಿ ಗ್ರಾಮದ ಬಡವರಿಗೆ ಕಂಬಳಿ, ವಿಮಾ ಯೋಜನೆಯ ಪತ್ರ ಹಾಗೂ ಸಸಿಗಳನ್ನು ವಿತರಿಸಲಾಯಿತು.
ಬಿಜೆಪಿ ಮುಖಂಡರಾದ ಸುರೇಂದ್ರಗೌಡ, ಸುರೇಶ್, ಬೈರೇಗೌಡ, ರವಿಕುಮಾರ್, ಸುಜಾತಮ್ಮ, ಮಂಜುಳಮ್ಮ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!