22.5 C
Sidlaghatta
Thursday, July 31, 2025

ವಾರಹುಣಸೇನಹಳ್ಳಿಯಲ್ಲಿ ಶ್ರೀಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ

- Advertisement -
- Advertisement -

ತಾಲ್ಲೂಕಿನ ವಾರಹುಣಸೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ, ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಪೂಜಾ ಕಾರ್ಯಕ್ರಮಗಳನ್ನು ಸೋಮವಾರ ನೆರವೇರಿಸಲಾಯಿತು.
ಬೆಳಗ್ಗೆ ಕಳಶಾರಾಧನೆ, ವೇದಪಾರಾಯಣ, ಸ್ವಸ್ತಿವಾಚನ, ವೇದ ಗಣಪತಿ ಹೋಮದೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಸಂಜೆಯವರೆಗೂ ನಿರಂತರವಾಗಿ ನಡೆದವು.
ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಧ್ವಜಸ್ತಂಭ, ವಿಮಾನಗೋಪುರ ಕಳಶಕ್ಕೆ ವಿಶೇಷ ಪೂಜೆ ಸಲ್ಲಿಸಿ ಕುಂಭಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿ ಮಹಾ ಮಂಗಳಾರತಿ ಮಾಡಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.
ಪೂಜಾ ಕಾರ್ಯಕ್ರಮಗಳ ನಂತರ ಆಗಮಿಸಿದ್ದ ಎಲ್ಲ ಭಕ್ತರಿಗೂ ಭಕ್ತರಿಂದ ಸಂಗ್ರಹಿಸಿದ್ದ ದವಸ ದಾನ್ಯ ಅಕ್ಕಿ ಬೇಳೆಯಿಂದ ತಯಾರಿಸಿ ಊಟದ ಅನ್ನ ಸಂತರ್ಪಣೆಯನ್ನು ನೆರವೇರಿಸಲಾಯಿತು.
ಸಂಜೆ ಶ್ರೀಆಂಜನೇಯಸ್ವಾಮಿ ಭಕ್ತರಿಂದ ಶ್ರೀರಾಮ, ಆಂಜನೇಯನನ್ನು ಭಜಿಸುವ ಭಕ್ತಿ ಗೀತೆಗಳ ಗಾಯನ ನಡೆಯಿತು. ವಾರಹುಣಸೇನಹಳ್ಳಿ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!