ತಾಲ್ಲೂಕಿನ ಮಳ್ಳೂರು ಗ್ರಾಮದ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು ಡೆಂಗ್ಯೂ ಜ್ವರವಿದ್ದಿರಬಹುದೆಂದು ಶಂಕಿಸಲಾಗಿದೆ.
ತಾಲ್ಲೂಕಿನ ಮಳ್ಳೂರು ಗ್ರಾಮದ ದ್ಯಾವಪ್ಪ, ಚಿನ್ನಮ್ಮಯ್ಯ ದಂಪತಿಗಳ ಮಗಳಾದ ಅಮೃತವರ್ಷಿಣಿ (೮) ಮೃತಪಟ್ಟಿರುವ ದುರ್ದೈವಿಯಾಗಿದ್ದಾಳೆ.
ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಗೆ ಕಳೆದ ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಹೆಚ್ಚಿನಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ, ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಗ್ರಾಮಸ್ಥರಆಕ್ರೋಶ: ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಬಾಲಕನೊಬ್ಬ ಮೃತಪಟ್ಟಿದ್ದಾನೆ. ನಾಲ್ಕೈದು ಮಂದಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ, ಇಷ್ಟಾದರೂ ಕೂಡಾ ಗ್ರಾಮ ಪಂಚಾಯತಿಯಿಂದ ಸ್ವಚ್ಛತೆಯ ಕುರಿತಂತೆ ಯಾವುದೇ ಕ್ರಮತೆಗೆದುಕೊಂಡಿಲ್ಲ. ಚರಂಡಿಗಳ ಸ್ವಚ್ಛತೆಯಿಲ್ಲ, ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮಳ್ಳೂರಿಗೆ ದೌಡಾಯಿಸಿದ ಆಸ್ಪತ್ರೆಯ ಸಿಬ್ಬಂದಿ : ಘಟನೆಯ ಹಿನ್ನೆಲೆಯಲ್ಲಿ ತಕ್ಷಣ ಗ್ರಾಮದ ಕಡೆಗೆ ದೌಡಾಯಿಸಿದ ಮೇಲೂರು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ಗ್ರಾಮದಲ್ಲಿನ ನಾಗರಿಕರ ಆರೋಗ್ಯ ತಪಾಸಣೆ, ಹಾಗೂ ರಕ್ತದ ಮಾದರಿಗಳನ್ನು ಸಂಗ್ರಹ ಮಾಡಿಕೊಂಡು ರಕ್ತಪರೀಕ್ಷೆಗೆ ಒಳಪಡಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -