ಶನೈಶ್ಚರಸ್ವಾಮಿಯ ಬ್ರಹ್ಮರಥೋತ್ಸವ

- Advertisement -
- Advertisement -

ನಗರದ ಕೆ.ಎಚ್.ಬಿ ಕಾಲೋನಿಯ ಗಾಯತ್ರಿನಗರದಲ್ಲಿನ ಮಹಾಗಣಪತಿ, ಗಾಯತ್ರಿದೇವಿ ಮತ್ತು ಶನೈಶ್ಚರಸ್ವಾಮಿ ದೇವಾಲಯದಲ್ಲಿ ಸೋಮವಾರ ಮಹಾಲಕ್ಷ್ಮಿಯಾಗ ಹಾಗೂ 17ನೇ ವರ್ಷದ ಶನೈಶ್ಚರ ಜಯಂತಿ, 108 ಲೀಟರ್ ಕ್ಷೀರಾಭಿಷೇಕ ಹಾಗೂ ಬ್ರಹ್ಮರಥೋತ್ಸವವನ್ನು ಆಯೋಜಿಸಲಾಗಿತ್ತು.
ಶನೈಶ್ಚರ ಜಯಂತಿ ಪ್ರಯುಕ್ತ ಸಾಮೂಹಿಕ ಎಳ್ಳು ದೀಪೋತ್ಸವ, ಶನೈಶ್ಚರಸ್ವಾಮಿಯ ಹೋಮ, ತೈಲಾಭಿಷೇಕ, 108 ಲೀಟರ್ ಹಾಲು ಮತ್ತು 108 ಲೀಟರ್ ಮೊಸರು ಅಭಿಷೇಕ, ಪಂಚಾಮೃತಾಭಿಷೇಕ, ಶಾಲ್ಯಾನ್ನ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಾಡಲಾಯಿತು.
ಆರು ದಿನಗಳ ಕಾಲ ನಡೆಯುವ ವಿವಿಧ ಪೂಜಾ ಕಾರ್ಯಕ್ರಮಗಳು ಶನಿವಾರ ಪ್ರಾರಂಭಗೊಂಡಿದ್ದು, ಗುರುವಾರದ ತನಕ ಸಾಗಲಿದೆ. ಈ ಪೂಜಾ ಕಾರ್ಯಗಳ ನಡುವೆ ಸೋಮವಾರ ಕೆ.ಎಚ್.ಬಿ. ಕಾಲೋನಿಯ ಮುಖ್ಯರಸ್ತೆಗಳಲ್ಲಿ ಬ್ರಹ್ಮರಥೋತ್ಸವದ ಮೆರವಣಿಗೆಯನ್ನು ಮಾಡಲಾಯಿತು. ನೂರಾರು ಭಕ್ತರು ನೆರೆದಿದ್ದರು. ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಕೆ.ಪಿ.ಸಿ.ಸಿ.ಉಪಾಧ್ಯಕ್ಷ ವಿ.ಮುನಿಯಪ್ಪ, ನಗರ್ತಮಂಡಳಿಯ ಶಿವಶಂಕರ್, ವಸಂತಕುಮಾರ್, ವಿ.ಎನ್.ರಾಮಮೋಹನ್ ಶಾಸ್ತ್ರಿ, ದಾಶರಥಿ, ತೀರ್ಥಂಕರ ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!