ಶಿಕ್ಷಕರು ಬದುಕಿನ ಮಾರ್ಗದರ್ಶಿಗಳು

- Advertisement -
- Advertisement -

ಮಕ್ಕಳ ಭವಿಷ್ಯಕ್ಕೆ ತಮ್ಮ ಜೀವನದ ಮುಕ್ಕಾಲು ಭಾಗವನ್ನು ಮುಡಿಪಾಗಿಡುವ ಶಿಕ್ಷಕರಿಗೆ, ಬದುಕಿನಲ್ಲಿ ಸರಿಯಾದ ದಿಕ್ಕಿನಲ್ಲಿ ಮುನ್ನುಗ್ಗಲು ಮಾರ್ಗದರ್ಶನ ಮಾಡುವ ಮಾರ್ಗದರ್ಶಕರಿಗೆ ನಮನವನ್ನು ಸಲ್ಲಿಸುವ ದಿನವೇ ಶಿಕ್ಷಕರ ದಿನಾಚರಣೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಾನಾಯಕ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳು ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಭವಿಷ್ಯ ರೂಪಿಸುವ, ನಮ್ಮನ್ನು ಸತ್ಪಥದಲ್ಲಿ ಮುನ್ನಡೆಯುವಂತೆ ಮಾರ್ಗ ತೋರುವ ಗುರುವಿನ ಸ್ಮರಣೆ ಸದಾಕಾಲ ಇರಲಿ. ಸಮಾಜದ ಸುಧಾರಣೆಯಲ್ಲಿ ಸಾರ್ವಜನಿಕರು ಶಿಕ್ಷಕರಿಂದ ಹಲವಾರು ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಉತ್ತಮ ಸಮಾಜ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಹೇಳಿದರು.
ಎನ್ ಎಸ್ ಎಸ್ ವಿಭಾಗದ ಶ್ರೀಹರಿ, ಪ್ರಾಧ್ಯಾಪಕರಾದ ಜಿ.ಕೆ.ರಮೇಶ್, ರೋಷನ್, ವೆಂಕಟರಮಣಪ್ಪ, ಉಮೇಶ್ ರೆಡ್ಡಿ, ವೆಂಕಟೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ನ ಡಾ.ಮುರಳಿ ಆನಂದ್ ಹಾಜರಿದ್ದರು.
 

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!