ನಗರದ ಶ್ರೀ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 43 ನೇ ಶಾಲಾ ವಾರ್ಷಿಕೋತ್ಸವ ಹಾಗೂ 10 ನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾಭಾರತಿ ಕರ್ನಾಟಕ ಮಾಜಿ ಪ್ರಾಂತೀಯ ಅಧ್ಯಕ್ಷ, ವಿಜ್ಞಾನ ಲೇಖಕ ಪ್ರೊ.ಎಂ.ಜೆ.ಸುಂದರ್ರಾಮ್ ಮಾತನಾಡಿದರು.
ಪ್ರತಿಯೊಂದನ್ನೂ ಸ್ವತಃ ನೋಡಿ, ಮಾಡಿ ಕಲಿಯುವ, ಎಲ್ಲದಕ್ಕೂ ಪುರಾವೆಯನ್ನು ಕೇಳುವ, ಪ್ರಶ್ನೆ ಕೇಳಿ ತಿಳಿದುಕೊಳ್ಳುವ, ಪ್ರಯೋಗ ಮಾಡಿ ಖಚಿತಪಡಿಸಿಕೊಳ್ಳುವ ಗುಣವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಪರಿಸರ ಸ್ನೇಹಿ ವೈಜ್ಞಾನಿಕ ಮನೋಭಾವ ಹೊಂದುವ ಮೂಲಕ ಪರಿಸರ ಕಾಪಾಡುವ ಕಾರ್ಯ ಮಾಡಬೇಕು. ವಿಜ್ಞಾನ ಎಂದರೆ ವಿಶಿಷ್ಟವಾದ ಜ್ಞಾನ, ಪ್ರತಿಯೊಬ್ಬರು ವೆಜ್ಞಾನಿಕ ಮನೋಭಾವ ಜತೆಗೆ ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಶ್ನೆ ಮಾಡದೆ ಯಾವುದನ್ನು ಸುಲಭವಾಗಿ ಒಪ್ಪಿಕೊಳ್ಳಬಾರದು ಎಂದು ಹೇಳಿದರು.
ವಿದ್ಯಾರ್ಥಿಗಳು ವಿಜ್ಞಾನ ಕಲಿಯಲು ಆಸಕ್ತರಾಗುವಂತಹ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಶಿಕ್ಷಕರು ಶಾಲೆಗಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಸಲಕರಣೆಗಳು ಹಾಗೂ ಇತರ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪರಿಣಾಮಕಾರಿ ಬೋಧನೆ ಮಾಡುವ ಮೂಲಕ ಮಕ್ಕಳನ್ನು ಪ್ರೇರೇಪಿಸಬೇಕು ಎಂದರು.
ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೆಳೆದವು.
ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷ ಎನ್.ಶ್ರೀಕಾಂತ್, ಕಾರ್ಯದರ್ಶಿ ಆರ್.ನಾಗಲಕ್ಷ್ಮಿ, ಆಡಳಿತಾಧಿಕಾರಿ ಸೋಮಶೇಖರ್, ಮುಖ್ಯಶಿಕ್ಷಕರಾದ ಎಸ್.ವಿ.ರಘು, ಎಂ.ಅಗಜಾನನಮೂರ್ತಿ, ವಿ. ರುಕ್ಮಿಣಿ, ಬಿ. ಮಂಜುಳ, ಶಿಕ್ಷಕಿ ಸಾವಿತ್ರಮ್ಮ ಹಾಜರಿದ್ದರು.
- Advertisement -
- Advertisement -
- Advertisement -







