ಸಡಗರ, ಸಂಭ್ರಮದೊಂದಿಗೆ ರಂಜಾನ್ ಹಬ್ಬದ ಆಚರಣೆ

- Advertisement -
- Advertisement -

ಪಟ್ಟಣದಲ್ಲಿ ಮಂಗಳವಾರ ಮುಸ್ಲೀಮರು ಸಡಗರ, ಸಂಭ್ರಮದೊಂದಿಗೆ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿದರು. ಪ್ರಮುಖ ಬೀದಿಯಲ್ಲಿ ಮೆರವಣಿಗೆಯೊಂದಿಗೆ ಸಾಗಿದ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬಂಧುಗಳು ಬೈಪಾಸ್‌ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ಹಂಚಿಕೊಂಡರು. ತಮ್ಮ ಮನೆಗಳಲ್ಲಿ ವಿಶೇಷ ಹಬ್ಬದೂಟ ಆಚರಿಸಿದರು. ಕ್ಷೇತ್ರದ ಶಾಸಕ ಎಂ.ರಾಜಣ್ಣ ಈದ್ಗಾ ಮೈದಾನಕ್ಕೆ ತೆರಳಿ ತಾಲ್ಲೂಕಿನ ಎಲ್ಲಾ ಮುಸ್ಲಿಂ ಬಾಂಧವರಿಗೆ ಶುಭಾಶಯವನ್ನು ಕೋರಿದರು. ಕೆಲವರು ತಮ್ಮ ಹಿರಿಯರ ಸಮಾಧಿಗೆ ಹೂಗಳಿಂದ ಅಲಂಕರಿಸಿ, ಅತ್ತರ್‌ ಹಾಕಿ, ಊದುಬತ್ತಿ ಬೆಳಗಿ ಪೂಜೆ ಸಲ್ಲಿಸಿದರು. ಬಡವರಿಗೆ ದಾನವನ್ನು ನೀಡಿದರು.
ಬೆಳಿಗ್ಗೆಯಿಂದ ಸಂಜೆಯವರೆಗೆ ಪರಸ್ಪರ ಅಪ್ಪಿಕೊಳ್ಳುತ್ತ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಇಡೀ ದಿನ ನಡೆದೇ ಇತ್ತು. ಮಕ್ಕಳು, ಮಹಿಳೆಯರು, ಹಿರಿಯರಾದಿಯಾಗಿ ಎಲ್ಲರೂ ಹೊಸ ಉಡುಗೆಗಳನ್ನು ತೊಟ್ಟು ಸಿಹಿಯನ್ನು ಸೇವಿಸಿ ಸಂಭ್ರಮಿಸಿದರು. ಮುಸ್ಲೀಮರು ತಮ್ಮ ಬಂಧು ಬಾಂಧವರು, ಸ್ನೇಹಿತರನ್ನು ಆದರದಿಂದ ಮನೆಗೆ ಬರಮಾಡಿಕೊಂಡು ಭೋಜನ ಮಾಡಿಸಿದರು. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನೀರವ ವಾತಾವರಣವಿತ್ತು. ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು, ವ್ಯಾಪಾರ ವಹಿವಾಟು ಮಂದವಾಗಿತ್ತು. ಪಟ್ಟಣದ ಬೀದಿಗಳಲ್ಲಿ ಎಂದಿನಂತೆ ವಾಹನ ಸಂಚಾರ ಅಷ್ಟೊಂದು ಕಂಡುಬರಲಿಲ್ಲ. ಈದ್ಗಾ ಮೈದಾನದ ಬಳಿ ವಿವಿಧ ಅಂಗಡಿ ಮುಂಗಟ್ಟುಗಳು ತಾತ್ಕಾಲಿಕವಾಗಿ ತೆರೆದಿದ್ದು, ತಿನಿಸುಗಳು, ಆಟಿಕೆಗಳು, ಹೂಗಳು, ಪೂಜಾ ಸಾಮಾನುಗಳು ಮುಂತಾದವುಗಳನ್ನು ಮಾರಾಟ ಮಾಡುತ್ತಿದ್ದರು. ವಿವಿಧ ಮಸೀದಿಗಳ ಮೌಲ್ವಿಗಳು ಈ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಿದವರಿಗೆ ಹಿತನುಡಿಗಳನ್ನು ಹೇಳಿದರು.
‘ರಂಜಾನ್ ಉಪವಾಸ ಮುಸ್ಲಿಮನೆನಿಸಿಕೊಳ್ಳಬೇಕಾದರೆ ಪಾಲಿಸಬೇಕಾದ ಐದು ಕರ್ತವ್ಯಗಳ್ಲಲಿ ಒಂದು. ಉಪವಾಸವನ್ನು ಅರಬಿಕ್ ಭಾಷೆಯ್ಲಲಿ ‘ಸೌಮ್’ ಎಂದರೆ, ಪರ್ಷಿಯನ್ ಮತ್ತು ಉರ್ದು ಭಾಷೆಯ್ಲಲಿ ‘ರೋಜಾ’ ಎಂದು ಕರೆಯಲಾಗುತ್ತದೆ. ಇಸ್ಲಾಮ್ ಧರ್ಮದ ಅನುಯಾಯಿಗಳು ಕಡ್ಡಾಯವಾಗಿ ವರ್ಷದ ಒಂಭತ್ತನೆಯ ತಿಂಗಳಾದ ರಂಜಾನ್ ತಿಂಗಳು ಪೂರ್ತಿ ಹಗಲು ಉಪವಾಸವನ್ನು ಆಚರಿಸಬೇಕಾಗುತ್ತದೆ. ಈ ತಿಂಗಳ್ಲಲಿ ಉಪವಾಸ, ದಾನ ಧರ್ಮ ಮಾಡುವುದರಿಂದ ಅರಿಶಡ್ವರ್ಗಗಳೇ ಮುಂತಾದ ಆಂತರ್ಯದ ಕಲ್ಮಶಗಳನ್ನು ಸುಟ್ಟು ಹೃದಯವನ್ನು ಪವಿತ್ರಗೊಳಿಸಲಾಗುತ್ತದೆ.
ಈ ಆಚರಣೆಯನ್ನು ನಿಯಮ, ಶಿಸ್ತುಗಳಿಗೆ ಬದ್ಧವಾಗಿಸಿ ಸರಳವಾಗಿ ಆಚರಿಸುವಂತೆ ಮುಸ್ಲಿಮರಿಗೆ ಪ್ರವಾದಿಯವರು ಕಡ್ಡಾಯಗೊಳಿಸಿದರು. ದಾನವನ್ನು ಕೂಡ ಉಳ್ಳವರು ಕ್ರಮಬದ್ಧವಾಗಿ ಮತ್ತು ನಿಯಮಬದ್ಧವಾಗಿ, ಬಡಬಗ್ಗರಿಗೆ ಇಂತಿಷ್ಟು ಪಾಲು ತಮ್ಮ ಧನಕನಕಗಳಿಂದ ನೀಡಬೇಕೆಂದು ನಿಯಮವನ್ನು ರೂಢಿಯನ್ನು ತಂದರು’ ಎಂದು ಈ ಸಂದರ್ಭದಲ್ಲಿ ಹಿರಿಯ ಮೌಲ್ವಿ ಮಹಮ್ಮದ್‌ ಅಷ್‌ಸ್ವಾಖ್‌ ಅಹಮದ್‌ ರಜ್ವಿ ತಿಳಿಸಿದರು.
ಮೌಲ್ವಿ ಮಹಮ್ಮದ್‌ ಅಸ್ಲಂ, ಸದರ್‌ ರಫೀಕ್‌ ಸಾಬ್‌, ಅಬ್ದುಲ್‌ ಸಲಾಂ, ಮುಖಂಡರಾದ ಬಂಕ್‌ಮುನಿಯಪ್ಪ, ಸೂರ್ಯನಾರಾಯಣಗೌಡ, ಅಫ್ಸರ್‌ಪಾಷ, ರಹಮತ್ತುಲ್ಲ, ಓ.ಟಿ.ಮುನಿಕೃಷ್ಣಪ್ಪ, ಮಹಬೂಬ್‌, ಸದರ್‌ ರಫೀಕ್‌ ಸಾಬ್‌, ಅಬ್ದುಲ್‌ ಸಲಾಂ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -