ತಾಲ್ಲೂಕಿನ ತಾತಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ‘ವರ್ಲಿ ಚಿತ್ರಕಲಾ’ ಕಾರ್ಯಾಗಾರವನ್ನು ಕವಯತ್ರಿ ಗೌರಿಬಿದನೂರು ಮಂಜುಳಾ ಏರ್ಪಡಿಸಿದ್ದರು.
ಬೆಂಗಳೂರಿನ ಅಜೀಂ ಪ್ರೇಮ್ಜಿ ಫೌಂಡೇಶನ್ನ ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ್, ಗಂಗಾಧರ್ ಮತ್ತು ದಿನೇಶ್ ಚಿತ್ರಕಲೆಯ ಇತಿಹಾಸ, ಹಿನ್ನೆಲೆ, ಬೆಳೆದು ಬಂದ ಬಗೆ ವಿವರಿಸಿ, ವರ್ಲಿ ಚಿತ್ರಕಲೆಯ ಮೂಲ ಲಕ್ಷಣಗಳನ್ನು ಉದಾಹರಣೆ ಮತ್ತು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತನ್ಮಯರಾಗಿ ವರ್ಲಿ ಚಿತ್ರಗಳನ್ನು ಬಿಡಿಸಿದರು. ಗುಡಿಹಳ್ಳಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೂ ಸಹ ಶಿಬಿರದಲ್ಲಿ ಭಾಗವಹಿಸಿದ್ದರು.
ನಂತರ ಕನಕಪುರದ ಜಾದೂಗಾರ ಗಂಗಾಧರ್ ಅವರು ವಿವಿಧ ಮ್ಯಾಜಿಕ್ ಟ್ರಿಕ್ಗಳನ್ನು ಪ್ರದರ್ಶಿಸಿದರು. ಕಾರ್ಯಾಗಾರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆಲ್ಲಾ ಪ್ರಮಾಣಪತ್ರ ವಿತರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಮ್ಮ, ಸಹಶಿಕ್ಷಕರಾದ ದೇವರಾಜ್, ಗಣೇಶ್ಬಾಬು, ಎಚ್.ಆರ್.ಮಂಜುನಾಥ್, ಡಿ.ಎಸ್.ಶ್ರೀಕಾಂತ್, ತ್ರಿವೇಣಿ, ಶ್ರೀನಿವಾಸ ಯಾದವ್, ಬಾಲಚಂದ್ರ, ಎಸ್.ಕಲಾಧರ್, ನಿವೃತ್ತ ಶಿಕ್ಷಣ ಸಂಯೋಜಕ ಆರ್.ಕೃಷ್ಣಪ್ಪ, ಚಿತ್ರಕಲಾ ಶಿಕ್ಷಕ ನಾಗರಾಜ್ ಮತ್ತಿತರರು ಶಿಬಿರದಲ್ಲಿ ಭಾಗವಹಿಸಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -