17.1 C
Sidlaghatta
Thursday, December 25, 2025

ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆಯ ಅಂಗವಾಗಿ ಏಕತಾ ಓಟ

- Advertisement -
- Advertisement -

ರಾಷ್ಟ್ರದ ಏಕತೆ, ಅಖಂಡತೆ, ಮತ್ತು ಸುರಕ್ಷತೆಗಾಗಿ ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮನ್ನು ತಾವು ಸಂಪೂರ್ಣವಾಗಿ ಸಮರ್ಪಣೆ ಮಾಡಿಕೊಂಡಾಗ ಮಾತ್ರ ದೇಶವು ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಹೇಳಿದರು.
ದೇಶದ ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆಯ ಅಂಗವಾಗಿ ಶುಕ್ರವಾರ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಲ್ಲಭಭಾಯಿ ಪಟೇಲರ ದೂರದೃಷ್ಟಿ, ದೇಶಕ್ಕಾಗಿ ಅವರು ಮಾಡಿದ ಸೇವೆ, ಇಡೀ ಜನಾಂಗಕ್ಕೆ ಮಾದರಿಯಾಗಬೇಕಾಗಿದೆ. ದೇಶದ ಯುವಜನತೆ ಪಟೇಲರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಸುಭದ್ರ ರಾಷ್ಟ್ರ ನಿರ್ಮಾಣ ಮಾಡಲು ಕೈ ಜೋಡಿಸಬೇಕು ಎಂದರು.
ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿವರೆಗೂ ಏಕತಾ ಓಟದಲ್ಲಿ ಪಾಲ್ಗೊಂಡವರಿಗೆ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಪ್ರತಿಜ್ಞಾವಿಧಿ ಬೋಧಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ್‌ಬಾಯಿರಿ, ಜಿಲ್ಲಾ ಉಪಾಧ್ಯಕ್ಷ ದಾಮೋದರ್, ಸಿ.ವಿ.ಲೋಕೇಶ್‌ಗೌಡ, ಎ.ಎಂ.ತ್ಯಾಗರಾಜ್, ಸುಜಾತಮ್ಮ, ಮಂಜುಳಮ್ಮ, ರತ್ನಮ್ಮ, ಶಿವಕುಮಾರಗೌಡ, ದ್ಯಾವಪ್ಪನಗುಡಿ ನಾರಾಯಣಸ್ವಾಮಿ, ಅಶ್ವಥ್, ಶ್ರೀರಾಮ್, ನಂದೀಶ್‌ ಮತ್ತಿತರರು ಏಕತಾ ಓಟದಲ್ಲಿ ಪಾಲ್ಗೊಂಡಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!