ಸಾಧಕರಿಗೆ, ವಿದ್ಯಾರ್ಥಿಗಳಿಗೆ ಆತ್ಮೀಯ ಸನ್ಮಾನ

- Advertisement -
- Advertisement -

ಪಟ್ಟಣ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ತಾಲ್ಲೂಕಿನಲ್ಲಿ ಜನಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಐವರು ಸಾಧಕರನ್ನು ಕೂಡ ಅಭಿನಂದಿಸಲಾಯತು. ಇನ್ಫೊಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಮತ್ತು ಪತ್ನಿ ಸುಧಾಮೂರ್ತಿ ಸಾಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿದರು.
ಅಂತರ್ರಾಷ್ಟ್ರೀಯ ಸಂಬಂಧಗಳ ತಜ್ಞ ಡಾ. ಕೃಷ್ಣಮೂರ್ತಿ ವೆಂಕಟರಾಮ್, ವ್ಯಂಗ್ಯಚಿತ್ರಕಾರ ಬಿ.ವಿ.ಪಾಂಡುರಂಗರಾವ್, ವಿಜ್ಞಾನಿ ಎನ್.ಆರ್.ಸಮರ್ಥರಾಮ್, ಇಂಡಿಯಾ ಇನ್ಫೊಲೈನ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಕ್ರಮಧಾತಿ ಶ್ರೀಧರ್ ಮತ್ತು ಭಾರತೀಯ ಸೇನೆಯ ಎಲೆಕ್ಟ್ರಾನಿಕ್ ಎಂಜಿನಿಯರ್ ಕ್ಯಾಪ್ಟನ್ ಎಂ.ವಿ.ಸುನೀಲ್ ಕುಮಾರ್ ಅವರನ್ನು ಅಭಿನಂದಿಸಲಾಯಿತು. ಹಣ್ಣುಹಂಪಲು, ಸ್ಮರಣಿಕೆ ಮತ್ತು ಪ್ರಮಾಣಪತ್ರ ನೀಡಿ ಸತ್ಕರಿಸಲಾಯಿತು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಾದ ಎಸ್.ಆದಿತ್ಯಾ, ಎನ್.ಎಸ್.ರೇವತಿ, ಎ.ಯು.ವರ್ಷಾ, ಅಭಯ್ ಇನಾಮದಾರ್, ಚಂದನಾ, ಎನ್.ಮೇಘನಾ, ಎಂ.ಅನೂಪ್ ಕೃಷ್ಣನ್ ಮತ್ತು ಎಸ್.ಆರ್.ಲಕ್ಷ್ಮಿ. ಪಿಯುಸಿ ವಿದ್ಯಾರ್ಥಿಗಳಾದ ಕೆ.ಅನ್ನಪೂರ್ಣಾ, ಎ.ಎಸ್.ಸ್ನೇಹಾ, ಬಿ.ಕೆ.ಪ್ರಕೃತಿ, ಎಚ್.ವಿ.ಅಕ್ಷತಾ, ಸಿ.ಎಸ್.ಭಾರ್ಗವ ಕಸ್ತೂರಿ ಮತ್ತು ಎಸ್.ದೀಪ್ತಿ. ಬೆಂಗಳೂರು ವಿಶ್ವವಿದ್ಯಾಲಯದ ಗಣಿತ ಎಂ.ಎಸ್ಸಿ ವಿದ್ಯಾರ್ಥಿನಿ ಎಚ್.ಆರ್.ಶ್ವೇತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಶಾಸಕ ಎಂ.ರಾಜಣ್ಣ, ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಡಾ. ಡಿ.ಟಿ.ಸತ್ಯನಾರಾಯಣ ರಾವ್, ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ವಿ.ಕೃಷ್ಣ, ಖಜಾಂಚಿ ಎನ್.ಶ್ರೀಕಾಂತ್, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್.ಪಿ.ಕುಲಕರ್ಣಿ, ಹಿರಿಯ ವಕೀಲ ಬಿ.ಸಿ.ಸೀತಾರಾಮರಾವ್, ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಕೆ.ಗುರುರಾಜ್ರಾವ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!