19.1 C
Sidlaghatta
Tuesday, December 30, 2025

ಸಾಮೂಹಿಕ ರಾಸು ವಿಮೆ ಯೋಜನೆಯಡಿ ರೈತರಿಗೆ ಪರಿಹಾರದ ಚೆಕ್ಕುಗಳ ವಿತರಣೆ

- Advertisement -
- Advertisement -

ನಗರದ ಕೋಚಿಮುಲ್ ಶಿಬಿರ ಘಟಕದ ಕಚೇರಿಯಲ್ಲಿ ಸಾಮೂಹಿಕ ರಾಸು ವಿಮೆ ಯೋಜನೆಯಡಿ ಮೃತಪಟ್ಟಿರುವ ರಾಸುಗಳ ರೈತರಿಗೆ ಪರಿಹಾರದ ಚೆಕ್ಕುಗಳನ್ನು ಶುಕ್ರವಾರ ವಿತರಿಸಿ ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿದರು.
ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಹಾಗೂ ರೈತರು ಖಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಲು ಮುಂದಾಗಬೇಕು ಎಂದು ಅವರು ತಿಳಿಸಿದರು.
ತಾಲ್ಲೂಕಿನಾದ್ಯಂತ ಸುಮಾರು ೨೧೦ ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು ಎಲ್ಲಾ ಸಂಘಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿವೆ. ಹಾಲು ಉತ್ಪಾದನೆ ಹಾಗೂ ಗುಣಮಟ್ಟದಲ್ಲಿ ಶಿಡ್ಲಘಟ್ಟ ತಾಲ್ಲೂಕು ಜಿಲ್ಲೆಯಲ್ಲಿಯೇ ಮೊದಲನೇ ಸ್ಥಾನದಲ್ಲಿದೆ. ಈ ಭಾಗದ ರೈತರು ತಮ್ಮ ರಾಸುಗಳಿಗೆ ವಿಮೆ ಮಾಡಿಸುವ ಮೂಲಕ ಕೋಚಿಮುಲ್ ನಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಮತ್ತಷ್ಟು ಮುಂದುವರೆಯಬೇಕು ಎಂದರು.
ತಾಲ್ಲೂಕಿನಾದ್ಯಂತ ಇತ್ತೀಚೆಗೆ ಮೃತಪಟ್ಟ ರಾಸುಗಳ ೨೯ ಮಂದಿ ಫಲಾನುಭವಿಗಳಿಗೆ ಸುಮಾರು ೧೬ ಲಕ್ಷ ಮೊತ್ತದ ವಿಮೆ ಚೆಕ್ ವಿತರಿಸಲಾಯಿತು. ರಾಸು ವಿಮೆ ಪಡೆದ ಫಲಾನುಭವಿಗಳು ಹಣವನ್ನು ವ್ಯರ್ಥಮಾಡದೆ ಉತ್ತಮ ರಾಸುಗಳನ್ನು ಖರೀದಿ ಮಾಡಿ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕೆಂದು ಸಲಹೆ ನೀಡಿದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!