19.1 C
Sidlaghatta
Sunday, December 21, 2025

ಸಿದ್ದಾರ್ಥ ನಗರದ ಸ್ಮಶಾನದಲ್ಲಿ ಮೂಢನಂಬಿಕೆ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ವತಿಯಿಂದ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಮೂಢನಂಬಿಕೆ ವಿರುದ್ಧ ಜನ ಜಾಗೃತಿ ಮೂಡಿಸಲು ಪರಿವರ್ತನಾ ದಿನವನ್ನಾಗಿ ಪಟ್ಟಣದ ಸಿದ್ದಾರ್ಥ ನಗರದ ಸ್ಮಶಾನದಲ್ಲಿ ದಾಸೋಹ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಎಂ.ಮುನಯ್ಯ ಮಾತನಾಡಿ,‘ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಮೌಢ್ಯತೆಯನ್ನು ಶಿಕ್ಕರಿಸುವ ಪರಿವರ್ತನಾ ದಿನವನ್ನಾಗಿ ಈ ಬಾರಿ ಆಚರಿಸುತ್ತಿದ್ದೇವೆ. ಬುದ್ಧ, ಬಸವ, ಅಂಬೇಡ್ಕರ್ ಕಲ್ಪನೆಯ ಸಮಾಜ ಸ್ಥಾಪನೆಗಾಗಿ ಈ ಕ್ರಾಂತಿಕಾರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೌಢ್ಯಾಚರಣೆಗಳು, ಅರ್ಥಹೀನ ಕಂದಾಚರಣೆಗಳ ಮೂಲಕ ಪುರೋಹಿತಶಾಹಿ ಶಕ್ತಿಗಳು ಸಾವಿರಾರು ವರ್ಷಗಳಿಂದ ದಲಿತ ಸಮುದಾಯವನ್ನು ಮತ್ತು ಮಹಿಳೆಯರನ್ನು ಶೋಷಿಸುತ್ತಾ ಬಂದಿದೆ. ಕನ್ನಡ ನಾಡಿನ ಹಳ್ಳಿಗಳಲ್ಲಿ ಸ್ವಾಭಿಮಾನದ ಕೂಗನ್ನು ಮೊಳಗಿಸಬೇಕಿದೆ’ ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಹಾಡುಗಳನ್ನು ಹಾಡಿ, ಅಡುಗೆಯನ್ನು ಸಿದ್ದಾರ್ಥ ನಗರದ ಸ್ಮಶಾನದಲ್ಲಿ ತಯಾರಿಸಿ ದಾಸೋಹವನ್ನು ನಡೆಸಲಾಯಿತು.
ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಅಧ್ಯಕ್ಷ ಎನ್.ಎ.ವೆಂಕಟೇಶ್, ಸಂಘಟನಾ ಸಂಚಾಲಕ ಟಿ.ಎ.ಚಲಪತಿ, ಸಿ.ಎಂ.ಲಕ್ಷ್ಮೀನಾರಾಯಣ, ಡಿ.ಎಂ.ವೆಂಕಟೇಶ್, ಹುಜಗೂರು ವೆಂಕಟೇಶ್, ದೊಡ್ಡತಿರುಮಳಯ್ಯ, ರವಿ. ನರಸಿಂಹಪ್ಪ, ಶ್ರೀರಾಮಪ್ಪ, ಪುರಸಭಾ ಸದಸ್ಯ ಚಿಕ್ಕಮುನಿಯಪ್ಪ, ಕೃಷ್ಣಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!