22.5 C
Sidlaghatta
Thursday, July 31, 2025

ಹಿಂದುಳಿದ ವರ್ಗದವರಿಗೆ ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ

- Advertisement -
- Advertisement -

ಹಿಂದುಳಿದ ವರ್ಗದ ಮಕ್ಕಳು ವಿದೇಶದಲ್ಲಿ ವ್ಯಾಸಂಗ ಮಾಡಲು 20 ಲಕ್ಷ ರೂವರೆಗೂ ಇಲಾಖೆಯ ವತಿಯಿಂದ ಸಿಗುತ್ತಿದ್ದು ಅದರ ಸದ್ಭಳಕೆ ಮಾಡಿಕೊಳ್ಳುವಂತೆ ತಹಶೀಲ್ದಾರ್ ಮನೋರಮಾ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ದಿವಂಗತ ದೇವರಾಜ ಅರಸು ಅವರ 101ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಹಲವಾರು ಯೋಜನೆಗಳಿದ್ದು, ಈ ಯೋಜನೆಗಳು ಜನರಿಗೆ ತಿಳಿಸುವ ಮೂಲಕ ಅರ್ಥಪೂರ್ಣವಾಗಿ ದಿವಂಗತ ದೇವರಾಜ ಅರಸು ಅವರ 101ನೇ ಜನ್ಮ ದಿನಾಚರಣೆ ನಡೆಸುವಂತೆ ಹೇಳಿದರು.
ಅಕ್ಟೋಬರ್ 20 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಲಯಗಳಲ್ಲಿದ್ದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಸರಳವಾಗಿ ಕಾರ್ಯಕ್ರಮವನ್ನು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶಂಕರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!