16.1 C
Sidlaghatta
Monday, December 8, 2025

೭೦ನೇ ವರ್ಷದ ಗಣರಾಜ್ಯೋತ್ಸವ ಸಮಾರಂಭ

- Advertisement -
- Advertisement -

ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಶನಿವಾರ ಆಯೋಜನೆ ಮಾಡಿಗಿದ್ದ ೭೦ನೇ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ದೇಶದ ಏಳಿಗೆಯು ಯುವಜನತೆಯ ಮೇಲೆ ಅವಲಂಬಿಸಿದೆ. ದೇಶಕ್ಕೆ ಪ್ರಪಂಚದ ಅತ್ಯಂತ ಬೃಹದಾಕಾರದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರ್ಮಾಣ ಮಾಡಿಕೊಂಡ ವ್ಯವಸ್ಥೆಯಲ್ಲಿ ಜೀವನ ಮಾಡುತ್ತಿರುವ ಪ್ರತಿಯೊಬ್ಬ ನಾಗರಿಕರು ಸಂವಿಧಾನದ ಆಶಯಗಳಿಗೆ ಕಟಿಬದ್ಧರಾಗಿ ಜೀವಿಸಬೇಕಾದಂತಹ ಅವಶ್ಯಕತೆ ಇದೆ ಎಂದು ಅವರು ಹೇಳಿದರು.
ಮೂಲಭೂತ ಸಮಸ್ಯೆಗಳನ್ನು ನಿವಾರಣೆ ಮಾಡಬೇಕಾಗಿದೆ ಯುವಶಕ್ತಿಯ ಮುಂದೆ ವ್ಯವಸ್ಥಿತವಾದ ಸಮಸ್ಯೆಗಳು ಎದುರಾಗುತ್ತಿವೆ, ಭಯೋತ್ಪಾದನೆ, ಕುಡಿಯುವ ನೀರಿನ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ, ಭಾರತಾಂಬೆಯ ರಕ್ಷಣೆಗೆ ನಾವೆಲ್ಲರೂ ಒಟ್ಟಾಗಬೇಕು, ಗಡಿಗಳ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಬೇಕು, ಶಾಲಾ ಮಕ್ಕಳು ಅಕ್ಷರಸ್ಥರಾಗಿ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡಬೇಕು, ಅನಕ್ಷರತೆ ತೊಲಗಬೇಕು, ದೇಶವನ್ನು ಸಾರ್ವಭೌಮ, ಸಮಾಜವಾದಿ, ಜ್ಯಾತ್ಯಾತೀತ ಮತ್ತು ಪ್ರಜಾಪ್ರಭುತ್ವ ಗಣತಂತ್ರವನ್ನಾಗಿ ಮಾಡಲು ಎಲ್ಲಾ ಪ್ರಜೆಗಳು ಸಂಕಲ್ಪ ಮಾಡಬೇಕಾಗಿದೆ, ದೇಶದಲ್ಲಿನ ಜನತೆಯನ್ನು ಭಯಬೀತಗೊಳಿಸುವಂತಹ ಭಯೋತ್ಪಾದನೆಯನ್ನು ಹತ್ತಿಕ್ಕುವಂತಹ ಪ್ರಯತ್ನಕ್ಕೆ ನಮ್ಮೆಲ್ಲರ ಸಹಕಾರ ನೀಡಬೇಕು ಎಂದರು.
ತಹಶೀಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿ, ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ, ನ್ಯಾಯ ಸಮ್ಮತವಾದ ಚಿಂತನೆ ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಮತ್ತು ಆರಾಧನೆಗಳಿಗೆ ಸ್ವಾತಂತ್ರ್ಯವನ್ನು ಹೊಂದಲು ಇಷ್ಟಪಡುವಂತಹ ಸ್ಥಾನಮಾನಗಳಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವುದರೊಂದಿಗೆ ದೇಶದಲ್ಲಿ ಸಮಾನತೆ, ಸಹೋದರತ್ವ, ಪರಸ್ಪರ ಪ್ರೀತಿ ಆದರಗಳನ್ನು ನಿರ್ಮಾಣ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ, ರೈತರ ಅಭಿವೃದ್ದಿಗಾಗಿ ಕೃಷಿ ಭಾಗ್ಯ, ಹಸಿವು ಮುಕ್ತರಾಜ್ಯ, ನಾಡಿನ ಮಕ್ಕಳ ಅಪೌಷ್ಟಿಕತೆ ನಿವಾರಣೆ, ದುರ್ಬಲ ವರ್ಗದ ಜನರ ಅಭಿವೃದ್ದಿಯು ಅವಶ್ಯಕತೆಯಿದೆ ಎಂದರು.
ಈ ಸಂಧರ್ಭದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ಆಯೋಜನೆ ಮಾಡಲಾಗಿತ್ತು. ಭಕ್ತರಹಳ್ಳಿ ಬಿ.ಎಂ.ವಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ವಾಸವಿಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ನೃತ್ಯರೂಪಕಗಳನ್ನು ಪ್ರದರ್ಶಿಸಿದರು. ನಗರಸಭೆ ವತಿಯಿಂದ ಆಶಾಕಿರಣ ಅಂಧಮಕ್ಕಳ ಶಾಲೆಗೆ ೨೫ ಸಾವಿರ ರೂಗಳ ಚೆಕ್ ನೀಡಲಾಯಿತು. ಸರ್ಕಾರಿ ಆಸ್ಪತ್ರೆ ವತಿಯಿಂದ ಆಯುಷ್ ಮಾನ್ ಭಾರತ್ ಕಾರ್ಡ್ ವಿತರಿಸಲಾಯಿತು. ನಗರದ ಬಿಲಾಲ್ ಯೂತ್ ಕಮಿಟಿ ಮತ್ತು ಯೂನಿಟಿ ಸಿಲ್ ಸಿಲಾ ಸಂಘಟನೆ ವತಿಯಿಂದ ಪಥಸಂಚಲಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಬಿಸ್ಕತ್, ನೀರು, ಸಿಹಿ ವಿತರಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಸದಸ್ಯ ಸತೀಶ್, ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ನಗರಸಭೆ ಆಯುಕ್ತ ಚಲಪತಿ, ಅಧ್ಯಕ್ಷ ಅಫ್ಸರ್ ಪಾಷ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಸದಸ್ಯ ಚಿಕ್ಕಮುನಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಬಾಬು, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ಕುಮಾರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಸುಬ್ರಮಣಿ, ನಾಗರಾಜ್, ಬಿ.ಎಂ.ವಿ.ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ವಿ.ಮುನೇಗೌಡ, ಕಾರ್ಯದರ್ಶಿ ಎ.ಕಾಳಪ್ಪ, ರೈತಸಂಘದ ಭಕ್ತರಹಳ್ಳಿ ಬೈರೇಗೌಡ, ರವಿಪ್ರಕಾಶ್, ಜೆ.ಎಸ್.ವೆಂಕಟಸ್ವಾಮಿ, ಪ್ರತೀಶ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!