ಅತಿವೃಷ್ಟಿಯಿಂದಾಗಿರುವ ಬೆಳೆ ನಷ್ಟ, ವಸತಿ, ಕೆರೆ ಕಟ್ಟೆ ಕಾಲುವೆ, ರಸ್ತೆ, ಚರಂಡಿಗಳು ಹಾಳಾಗಿರುವುದನ್ನು ವೀಕ್ಷಿಸಲು ಕೇಂದ್ರದ ತಂಡ ಶನಿವಾರ ಶಿಡ್ಲಘಟ್ಟಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ DC ಆರ್.ಲತಾ ಅವರು ತಾಲ್ಲೂಕಿಗೆ ಶುಕ್ರವಾರ ಭೇಟಿ ನೀಡಿದ್ದರು. ಶಿಡ್ಲಘಟ್ಟ ನಗರದಲ್ಲಿನ ಕುರುಬರಪೇಟೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳು, ಬೆಳ್ಳೂಟಿ ಕೆರೆಯಿಂದ ಭದ್ರನಕೆರೆಗೆ ನೀರು ಹರಿಯುವ ಕಾಲುವೆ ಒತ್ತುವರಿಯಿಂದ ನೀರು ನುಗ್ಗಿದ್ದ ಬೆಳೆಗಳ ಪ್ರದೇಶ ಹಾಗೂ ಆನೆಮಡಗು...